ಸುರಪುರ (ಯಾದಗಿರಿ ಜಿಲ್ಲೆ): ವ್ಯಕ್ತಿಯೊಬ್ಬ ಮಧ್ಯರಾತ್ರಿ ಮಹಿಳೆಯ ಮನೆಗೆ ನುಗ್ಗಿ ಅತ್ಯಾಚಾರಕ್ಕೆ ಯತ್ನಿಸಿದ್ದು, ತಪ್ಪಿಸಿಕೊಳ್ಳಲು ಯತ್ನಿಸಿದ ಆಕೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿದ ಪ್ರಕರಣ ತಾಲ್ಲೂಕಿನ ಗ್ರಾಮವೊಂದರಲ್ಲಿ ನಡೆದಿದೆ.
‘ಗಂಗಪ್ಪ ಬಸಪ್ಪ ಅರಳೊಳ್ಳಿ ಎಂಬಾತ ಕೃತ್ಯವೆಸಗಿದ್ದು, ಆತನ ಪತ್ತೆ ಕಾರ್ಯ ನಡೆದಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಿ.ಬಿ.ವೇದಮೂರ್ತಿ ತಿಳಿಸಿದರು.
‘ಆರೋಪಿ ಮಹಿಳೆಯ ಮನೆಗೆ ಭಾನುವಾರ ಮಧ್ಯರಾತ್ರಿ 2 ಗಂಟೆಗೆ ನುಗ್ಗಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ತಪ್ಪಿಸಿಕೊಳ್ಳಲು ಯತ್ನಿಸಿದಾಗ, ಸಿಟ್ಟಿಗೆದ್ದ ಆತ ಮನೆ ಹೊರಗಡೆ ನಿಲ್ಲಿಸಿದ್ದ ಬೈಕ್ನಿಂದ ಪೆಟ್ರೋಲ್ ತಂದು ಸುರಿದು ಬೆಂಕಿ ಹಚ್ಚಿದ್ದಾನೆ. ತೀವ್ರ ಗಾಯಗೊಂಡ ಆಕೆಯನ್ನು ಸುರಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ನಂತರ ಕಲಬುರ್ಗಿ ಜಿಮ್ಸ್ಗೆ ಕರೆದೊಯ್ಯಲಾಯಿತು’ ಎಂದು ಅವರು ಹೇಳಿದರು.
‘ಮಹಿಳೆಗೆ ಶೇ 95ರಷ್ಟು ಸುಟ್ಟಗಾಯಗಳಾಗಿದ್ದವು. ಉಳಿಸುವ ಯತ್ನ ಫಲಕಾರಿಯಾಗಲಿಲ್ಲ’ ಎಂದು ಕಲಬುರ್ಗಿ ಜಿಲ್ಲಾ ಸರ್ಜನ್ ಡಾ. ಅಂಬಾರಾಯ ರುದ್ರವಾಡಿ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.