ADVERTISEMENT

‘ಸರ್ಕಾರದ ಯೋಜನೆಗಳ ಸದುಪಯೋಗ ಪಡೆಯಿರಿ’

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2024, 15:32 IST
Last Updated 14 ಸೆಪ್ಟೆಂಬರ್ 2024, 15:32 IST
ನಾರಾಯಣಪುರ ಸಮೀಪದ ಅಮ್ಮಾಪುರ ಎಸ್‌.ಕೆ. ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಇತ್ತೀಚೆಗೆ ಸಮವಸ್ತ್ರ ಮತ್ತು ಶೂ, ಸಾಕ್ಸ್‌ಗಳನ್ನು ವಿತರಿಸಲಾಯಿತು
ನಾರಾಯಣಪುರ ಸಮೀಪದ ಅಮ್ಮಾಪುರ ಎಸ್‌.ಕೆ. ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಇತ್ತೀಚೆಗೆ ಸಮವಸ್ತ್ರ ಮತ್ತು ಶೂ, ಸಾಕ್ಸ್‌ಗಳನ್ನು ವಿತರಿಸಲಾಯಿತು   

ನಾರಾಯಣಪುರ : ಸಮೀಪದ ಅಮ್ಮಾಪುರ ಎಸ್. ಕೆ. ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಇತ್ತೀಚೆಗೆ ಸಮವಸ್ತ್ರ ಮತ್ತು ಶೂಗಳನ್ನು ವಿತರಿಸಲಾಯಿತು.

ಈ ವೇಳೆ ಮಾತನಾಡಿದ ಶಾಲೆಯ ಮುಖ್ಯಶಿಕ್ಷಕ ಅಚ್ಚಪ್ಪಗೌಡ, ‘ಎಲ್ಲ ವಿದ್ಯಾರ್ಥಿಗಳು ಸರ್ಕಾರದ ಯೋಜನೆಗಳ ಸದುಪಯೋಗ ಪಡೆದುಕೊಂಡು ಚೆನ್ನಾಗಿ ಓದಿ ಉತ್ತಮ ಅಂಕ ಗಳಿಸುವ ಮೂಲಕ ಶಾಲೆಗೆ ಮತ್ತು ಗ್ರಾಮಕ್ಕೆ ಗೌರವ ತರಬೇಕು. ಪ್ರತಿಯೊಬ್ಬರು ದೇಶದ ಒಳ್ಳೆಯ ಪ್ರಜೆಯಾಗಬೇಕು’ ಎಂದು ಹೇಳಿದರು.

ಈ ಸಂದರ್ಭದಲ್ಲಿ ಎಸ್‌ಡಿಎಂಸಿ ಪದಾಧಿಕಾರಿಗಳು, ಶಾಲೆಯ ಶಿಕ್ಷಕ ವೃಂದ ಸೇರಿದಂತೆ ಗ್ರಾಮಸ್ಥರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.