ಗುರುಮಠಕಲ್: ರಕ್ತದೊತ್ತಡದ ಸಮಸ್ಯೆಯಿಂದ (ಲೋ ಬಿಪಿ) ಅನಾರೋಗ್ಯಕ್ಕೆ ಈಡಾಗಿದ್ದ ಚಂಡರಕಿ ಗ್ರಾಮದ ತಾಲ್ಲೂಕು ಪಂಚಾಯಿತಿ ಸದಸ್ಯ ನಾಗೇಂದ್ರಪ್ಪ ಪೀರಮ್ಮೋಳ (36) ಭಾನುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಎರಡು ದಿನಗಳ ಹಿಂದೆ ಲೋ ಬಿಪಿ ಕಾರಣ ತಲೆಸುತ್ತಿ ಬಿದ್ದಿದ್ದರು. ನಂತರ ಚೇತರಿಸಿಕೊಂಡಿದ್ದ ಅವರಿಗೆ ಭಾನುವಾರ ಮತ್ತೆ ರಕ್ತದೊತ್ತಡದ ಸಮಸ್ಯೆ ಕಾಣಿಸಿಕೊಂಡಿದ್ದು, ಕಲಬುರ್ಗಿಯ ಚಿರಾಯು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ತೀವ್ರ ಹೃದಯಾಘಾತ ಉಂಟಾದ ಕಾರಣ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಸೋಮವಾರ ಬೆಳಿಗ್ಗೆ 11ಕ್ಕೆ ಚಂಡರಕಿ ಗ್ರಾಮದಲ್ಲಿ ಅಂತ್ಯಕ್ರಿಯೆ ಜರುಗಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.