ಶಹಾಪುರ: ತಾಲ್ಲೂಕಿನ ಹತ್ತಿಗೂಡೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಂಗಂಡಿ ಗ್ರಾಮದ ನಾಲ್ಕು ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ ನಡೆಸಿ, ಆಯ್ಕೆಯಾದವರು ಊರಿನ ದೇವಸ್ಥಾನ ಜೀರ್ಣೋದ್ಧಾರಕ್ಕೆ ತಲಾ₹1ಲಕ್ಷ ಕಾಣಿಕೆ ನೀಡಬೇಕು ಎಂಬ ನಿರ್ಧಾರವನ್ನು ಗ್ರಾಮದ ಮುಖಂಡರು ಕೈಗೊಂಡಿದ್ದಾರೆ ಎನ್ನಲಾಗುತ್ತಿದೆ.
ಕಾಂಗ್ರೆಸ್ ಬೆಂಬಲಿಗರಿಗೆ ಮೂರು ಸ್ಥಾನ ಹಾಗೂ ಬಿಜೆಪಿ ಬೆಂಬಲಿಗರಿಗೆ ಒಂದು ಸ್ಥಾನ ಹಂಚಿಕೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
‘ಅವಿರೋಧಆಯ್ಕೆಯ ನೆಪದಲ್ಲಿ ₹1ಲಕ್ಷ ಹಣ ಪಡೆದುಕೊಳ್ಳುವುದನ್ನು ತಕ್ಷಣ ನಿಲ್ಲಿಸಬೇಕು ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು’ಎಂದು ಪರಿಶಿಷ್ಟ ಜಾತಿಯ ಮುಖಂಡ ಶರಣುರಡ್ಡಿ ಹತ್ತಿಗೂಡೂರ ಅವರು ತಾಲ್ಲೂಕು ಚುನಾವಣೆ ಅಧಿಕಾರಿಗೆ ಮನವಿ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.