ADVERTISEMENT

ಜನರ ಸಮಸ್ಯೆ ಬಗೆಹರಿಸಲು ಶಾಸಕರ ಸೂಚನೆ

ನಗರಾಭಿವೃದ್ಧಿ ಪ್ರಾಧಿಕಾರದ ಪದಾಧಿಕಾರಿಗಳಿಗೆ ಸನ್ಮಾನ

​ಪ್ರಜಾವಾಣಿ ವಾರ್ತೆ
Published 14 ಜುಲೈ 2020, 17:41 IST
Last Updated 14 ಜುಲೈ 2020, 17:41 IST
ಯಾದಗಿರಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷ ಹಾಗೂ ಸದಸ್ಯರನ್ನು ನಗರ ಬಿಜೆಪಿ ಮಂಡಲ ವತಿಯಿಂದ ಸನ್ಮಾನಿಸಲಾಯಿತು
ಯಾದಗಿರಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷ ಹಾಗೂ ಸದಸ್ಯರನ್ನು ನಗರ ಬಿಜೆಪಿ ಮಂಡಲ ವತಿಯಿಂದ ಸನ್ಮಾನಿಸಲಾಯಿತು   

ಯಾದಗಿರಿ: ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷ ಹಾಗೂ ಸದಸ್ಯರನ್ನು ನಗರ ಬಿಜೆಪಿ ಮಂಡಲ ವತಿಯಿಂದ ಸೋಮವಾರ ಸನ್ಮಾನಿಸಲಾಯಿತು.

ಶಾಸಕ ವೆಂಕಟರೆಡ್ಡಿ ಮುದ್ನಾಳ ಮಾತನಾಡಿ, ‘ನಗರದ ಜನರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವುಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಶ್ರಮಿಸಿ. ನಾನು ನಿಮ್ಮ ಜೊತೆಗೂಡಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ‘ ಎಂದರು.

ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಬಸವರಾಜ ಚಂಡರಕಿ, ಸದಸ್ಯರಾದ ರುದ್ರಗೌಡ ಪಾಟೀಲ, ಶಿವಕಾಂತಮ್ಮ ವಡ್ನಳ್ಳಿ, ಸುಭಾಶ ಮಾಳಿಕೇರಿ, ಮಂಜುನಾಥ ಜಡಿ, ಖಂಡಪ್ಪ ದಾಸನ, ನಗರ ಮಂಡಲ ಬಿಜೆಪಿ ಅಧ್ಯಕ್ಷ ಸುರೇಶ ಅಂಬಿಗೇರ, ಶರಣು ಆಶನಾಳ, ಹಣಮಂತ ವಲ್ಯಾಪುರೆ, ನಗರಸಭೆ ಸದಸ್ಯರಾದ ಹಣಮಂತ ಇಟಗಿ, ಸ್ವಾಮಿದೇವ ದಾಸನಕೇರಿ, ವಿಲಾಸ ಪಾಟೀಲ, ಸುರೇಶ ಮಡ್ಡಿ, ಮಾರುತಿ ಕಲಾಲ, ಮರೆಪ್ಪ ವಡಿಗೇರಿ, ರವಿ ಬಾಪುರೆ, ಚಂದ್ರಕಾಂತ ಮಡ್ಡಿ, ಮಶೆಪ್ಪ, ಬಸವರಾಜ ನಾಯಕ, ಸುನೀತಾ ಚವ್ಹಾಣ, ಬಿಜೆಪಿ ಕಾರ್ಯಕರ್ತರು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.