ಯಾದಗಿರಿ: ಪ್ರೀತಿಸಿ ಮದುವೆಯಾದ ಪ್ರೇಮಿಗಳಿಗೆ ಪೋಷಕರು ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿ ಪ್ರೇಮಿಗಳು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದಾರೆ.
ನಗರದ ಬಸವೇಶ್ವರಿ (21) ಹಾಗೂ ಸಂದೇಶ (23) ಪ್ರೀತಿಸಿ ವಿವಾಹ ಆಗಿದ್ದ ಜೋಡಿ.
ಕಳೆದ ಮೇ 18 ರಂದು ವಿವಾಹ ನೋಂದಣಿ ಕಚೇರಿಯಲ್ಲಿ ಕಾನೂನಿನ ಪ್ರಕಾರ ಮದುವೆ ಆಗಿದ್ದಾರೆ. ಅಂತರ ಜಾತಿಯ ವಿವಾಹ ಆಗಿದ್ದರಿಂದ ಹುಡುಗಿಯ ಪೋಷಕರು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ನಿತ್ಯ ಕರೆ ಮಾಡಿ ಬೆದರಿಕೆ ಹಾಕುತ್ತಿದ್ದಾರೆ. ಇದರಿಂದ ನೆಮ್ಮದಿ ಇಲ್ಲದಂತಾಗಿದೆ. ಜೀವ ಭಯ ಕಾಡುತ್ತಿದೆ ಎಂದು ಎಸ್ಪಿ ಋಷಿಕೇಶ್ ಭಗವಾನ್ ಗೆ ದೂರು ಸಲ್ಲಿಸಿದ್ದಾರೆ. ಅಲ್ಲದೆ ಬೆದರಿಕೆ ಹಾಕುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಈ ಬಗ್ಗೆ ಎಸ್ಪಿ ಋಷಕೇಶ್ ಭಗವಾನ್ ಮಾತನಾಡಿ, ಕಾನೂನಿನ ಪ್ರಕಾರ ವಿವಾಹ ಆಗಿದ್ದ ಜೋಡಿಗಳಿಗೆ ರಕ್ಷಣೆ ಕೊಡುವುದಾಗಿ ಭರವಸೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.