ADVERTISEMENT

₹3.50 ಲಕ್ಷ ಕಳವು

​ಪ್ರಜಾವಾಣಿ ವಾರ್ತೆ
Published 3 ಜುಲೈ 2022, 2:19 IST
Last Updated 3 ಜುಲೈ 2022, 2:19 IST

ಯಾದಗಿರಿ: ಗಮನ ಬೇರೆಡೆ ಸೆಳೆದು ₹3.50 ಲಕ್ಷ ಕಳ್ಳತನ ಮಾಡಿದ ಘಟನೆ ನಗರದಲ್ಲಿ ಶನಿವಾರ ನಡೆದಿದೆ.

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ಸೂಗೂರು ಎನ್‌ ಗ್ರಾಮದ ಸಂಗಾರೆಡ್ಡಿ ಪಾರ್ವತರೆಡ್ಡಿ ಮಾಲಿಪಾಟೀಲ ನಗರದ ಎಚ್‌ಡಿಎಫ್‌ಸಿ ಬ್ಯಾಂಕ್‌ನಲ್ಲಿ ತಮ್ಮ ಹೆಸರಿನಲ್ಲಿರುವ ಅಕೌಂಟ್‌ನಲ್ಲಿ ನಾಲ್ಕು ಲಕ್ಷ ರೂಪಾಯಿ ಡ್ರಾ ಮಾಡಿಕೊಂಡಿದ್ದಾರೆ.

ಅದರಲ್ಲಿ ಖರ್ಚಿಗಾಗಿ ₹50,000 ತಮ್ಮ ಜೇಬಿನಲ್ಲಿ ಇಟ್ಟುಕೊಂಡು, ಉಳಿದ ₹3.50 ಲಕ್ಷ ಹಣವನ್ನು ತಮ್ಮ ಮೋಟರ್ ಸೈಕಲ್‌ನ ಪೆಟ್ರೋಲ್ ಟ್ಯಾಂಕ್ ಕವರ್‌ನಲ್ಲಿ ಇಟ್ಟು ಕಟ್ಟಿಗೆ ಖರೀದಿ ಕುರಿತು ರಘುವೀರ್ ಸಾಮಿಲ್‌ಗೆ ಹೋಗಿದ್ದಾರೆ. ತಮ್ಮ ಮೋಟಾರ್ ಸೈಕಲ್ ನಿಲ್ಲಿಸಿ ಕಟ್ಟಿಗೆ ವಿಚಾರ ಮಾಡುತ್ತಿರುವಾಗ ಹಿಂದಿನಿಂದ ಒಬ್ಬ ವ್ಯಕ್ತಿ ಬಂದು ಮೋಟಾರ್ ಸೈಕಲ್‌ನಲ್ಲಿ ಇಟ್ಟಿದ್ದ ಹಣವನ್ನು ತೆಗೆದುಕೊಂಡು ಹೋಗಿರುತ್ತಾನೆ ಎಂದು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.