ADVERTISEMENT

ವಡಗೇರಾ: ಸೇತುವೆಯ ಮೇಲೆ ಭಾರಿ ವಾಹನಗಳ ಸಂಚಾರ ನಿಷೇಧ

​ಪ್ರಜಾವಾಣಿ ವಾರ್ತೆ
Published 10 ಸೆಪ್ಟೆಂಬರ್ 2024, 14:19 IST
Last Updated 10 ಸೆಪ್ಟೆಂಬರ್ 2024, 14:19 IST
ವಡಗೇರಾ ತಾಲ್ಲೂಕಿನ ಗುರುಸುಣಿಗಿ ಕ್ರಾಸ್ ಹತ್ತಿರ ಬ್ಯಾರಿಕೇಡ್‌ಗಳನ್ನು ಹಾಕಿ ಪೊಲೀಸ್‌ ಸಿಬ್ಬಂದಿ ರಾಜ್ಯ ಹೆದ್ದಾರಿಯನ್ನು ಬಂದ್ ಮಾಡಿರುವುದು
ವಡಗೇರಾ ತಾಲ್ಲೂಕಿನ ಗುರುಸುಣಿಗಿ ಕ್ರಾಸ್ ಹತ್ತಿರ ಬ್ಯಾರಿಕೇಡ್‌ಗಳನ್ನು ಹಾಕಿ ಪೊಲೀಸ್‌ ಸಿಬ್ಬಂದಿ ರಾಜ್ಯ ಹೆದ್ದಾರಿಯನ್ನು ಬಂದ್ ಮಾಡಿರುವುದು   

ವಡಗೇರಾ: ವಡಗೇರಾ ತಾಲ್ಲೂಕಿನ ಗುರುಸುಣಿಗಿ ಕ್ರಾಸ್‌ನಿಂದ ಯಾದಗಿರಿ ನಗರಕ್ಕೆ ಹೋಗುವ ರಾಜ್ಯ ಹೆದ್ದಾರಿಯ ಭೀಮಾ ನದಿಯ ಹಳೆಯ ಸೇತುವೆಯ ಮೇಲೆ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.

ಗುರುಸುಣಿಗಿ ಕ್ರಾಸ್‌ನಿಂದ ಭೀಮಾ ನದಿಗೆ ಅಡ್ಡಲಾಗಿ ಕಟ್ಟಿರುವ ಹೊಸ ಬ್ರಿಜ್ ಕಂ. ಬ್ಯಾರೇಜು ಮೂಲಕ ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗಿದೆ.

ಗುರುಸುಣಿಗಿ ಗ್ರಾಮದ ಕ್ರಾಸ್ ಹತ್ತಿರ ಬ್ಯಾರಿಕೇಡ್ ಹಾಕಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ಯಾದಗಿರಿ ನಗರದ ಸಮೀಪದಲ್ಲಿ ರೈಲ್ವೆ ಸೇತುವೆಯ ಹತ್ತಿರ ಭೂ ಕುಸಿತ ಹಾಗೂ ಭೀಮಾ ನದಿಯ ಹಳೆಯ ಸೇತುವ ಮೇಲೆ ಇರುವ ರಸ್ತೆಯು ಸಂಪೂರ್ಣವಾಗಿ ಹದಗೆಟ್ಟಿರುವುದರಿಂದ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಈ ಕ್ರಮವನ್ನು ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.