ಯಾದಗಿರಿ: ತಾಲ್ಲೂಕಿನ ರಾಮಸಮುದ್ರ ಗ್ರಾಮದ ಪದ್ಮಮ್ಮ ನಾಗರಾಜ ದಂಪತಿಗೆ ತ್ರಿವಳಿ ಗಂಡು ಮಕ್ಕಳು ಜನಿಸಿದ್ದು, ಹಣಕಾಸಿನ ಸಹಾಯಕ್ಕೆ ಮೊರೆ ಇಟ್ಟಿದ್ದರು. ಕಷ್ಟವನ್ನು ತಿಳಿದ ಬಾಲಿವುಡ್ ನಟ ಸೋನು ಸೂದ್ ನೆರವು ನೀಡುವ ಭರವಸೆ ನೀಡಿದ್ದಾರೆ.
ಆಗಸ್ಟ್ 22ರಂದು ನಗರದ ಜಿಲ್ಲಾ ಆಸ್ಪತ್ರೆಯಲ್ಲಿವೈದ್ಯರು ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಿದ್ದು, ತಾಯಿ ಮಕ್ಕಳು ಆರೋಗ್ಯದಿಂದ ಇದ್ದಾರೆ.
ಕೂಲಿ ಮಾಡಿಕೊಂಡು ಜೀವನ ಸಾಗಿರುತ್ತಿರುವ ನಾಗರಾಜ ಅವರ ಕುಟುಂಬ ತೀವ್ರ ಆರ್ಥಿಕ ಸಂಕಷ್ಟದಲ್ಲಿದೆ ಎಂಬ ಮಾಹಿತಿಯನ್ನುಸ್ಥಳೀಯ ಪತ್ರಕರ್ತರೊಬ್ಬರು ನಟ ಸೋನು ಸೂದ್ ಅವರ ಗಮನಕ್ಕೆ ತಂದರು. ಅವರ ತಂಡದ ಮುಖ್ಯಸ್ಥ ಗೋವಿಂದ ಅಗ್ರವಾಲ್ ಅವರು ನಾಗರಾಜ ಅವರಿಗೆ ಕರೆ ಮಾಡಿ, ‘ಆತಂಕ ಪಡಬೇಡಿ. ನಿಮಗೆ ಎರಡು ತಿಂಗಳಿಗೆ ಆಗುವಷ್ಟು ಆಹಾರ ಪದಾರ್ಥ ನೀಡುವ ಜೊತೆಗೆ ಮಕ್ಕಳ ಚಿಕಿತ್ಸೆಗೆ ಆರ್ಥಿಕ ಸಹಾಯ ನೀಡುತ್ತೇವೆ’ ಎಂದು ಹೇಳಿದ್ದಾರೆ.
ಇದರಿಂದ ಬಡ ಕುಟುಂಬದಲ್ಲಿ ಕೊಂಚ ನೆಮ್ಮದಿ ಮೂಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.