ADVERTISEMENT

ಕೆರೆಯಲ್ಲಿ ಮುಳುಗಿ ಇಬ್ಬರು ಯುವಕರ ಸಾವು

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2022, 10:48 IST
Last Updated 19 ಮಾರ್ಚ್ 2022, 10:48 IST

ಯರಗೋಳ (ಯಾದಗಿರಿ ಜಿಲ್ಲೆ): ಗ್ರಾಮದಲ್ಲಿ ಶನಿವಾರ ಹೋಳಿ ಹುಣ್ಣಿಮೆ ಅಂಗವಾಗಿ ಗೆಳೆಯರೊಂದಿಗೆ ಬಣ್ಣದಾಟ ಆಡಿ ಗ್ರಾಮದ ಹೊರವಲಯದ ಕೆರೆಯಲ್ಲಿ ಸ್ನಾನ ಮಾಡಲು ಹೋಗಿದ್ದಇಬ್ಬರು ಯುವಕರುಈಜು ಬಾರದೆ ನೀರಿನಲ್ಲಿ ಮುಳುಗಿಮೃತಪಟ್ಟ ಘಟನೆ ಶನಿವಾರ ನಡೆದಿದೆ.

ಮಾರ್ತಂಡಪ್ಪ (19), ಸಾಬಣ್ಣ (18) ಕೆರೆಯಲ್ಲಿ ಮೃತಪಟ್ಟ ಯುವಕರು.

12 ಕ್ಕೂ ಹೆಚ್ಚು ಜನರ ಗುಂಪಿನ ಯುವಕರು ಹುಣ್ಣಿಮೆ ಅಂಗವಾಗಿ ಬಣ್ಣದಾಟ ಆಡಿಕೊಂಡು ಸ್ನಾನ ಮಾಡಲು ಗ್ರಾಮದ ಹೊರವಲಯದ ಕೆರೆಗೆ ಹೋಗಿದ್ದಾರೆ.

ADVERTISEMENT

ಮೃತ ಯುವಕ ಸಾಬಣ್ಣನ ದೇಹ ಪತ್ತೆಯಾಗಿದೆ. ಇನ್ನೊಂದು ದೇಹಕ್ಕಾಗಿ ಹುಡುಕಾಟ ನಡೆಸಲಾಗುತ್ತಿದೆ. ಎಂದು ಯಾದಗಿರಿ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.