ADVERTISEMENT

ವಡಗೇರಾ: ಸಂಗೊಳ್ಳಿ ರಾಯಣ್ಣ ಜಯಂತಿ

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2020, 15:46 IST
Last Updated 15 ಆಗಸ್ಟ್ 2020, 15:46 IST
ವಡಗೇರಾ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತಿ ಆಚರಿಸಲಾಯಿತು
ವಡಗೇರಾ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತಿ ಆಚರಿಸಲಾಯಿತು   

ವಡಗೇರಾ: ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಶನಿವಾರ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಜಯಂತಿ ಆಚರಿಸಲಾಯಿತು.

ಪಟ್ಟಣದ ಮುಖಂಡರಾದ ಬಸವರಾಜ ಸೊನ್ನದ, ಎಪಿಎಂಸಿ ಮಾಜಿ ಅಧ್ಯಕ್ಷ ದೇವಪ್ಪ ಕಡೆಚೂರ ಸಂಗೋಳ್ಳಿ ರಾಯಣ್ಣ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು.

ಯುವ ಮುಖಂಡ ಫಕೀರ್ ಅಹ್ಮದ್ ಮರಡಿ ಮಾತನಾಡಿ, ಸಂಗೊಳ್ಳಿ ರಾಯಣ್ಣ ಕಿತ್ತೂರು ಸಂಸ್ಥಾನದ ರಾಣಿ ಚನ್ನಮ್ಮನ ಬಲಗೈ ಬಂಟನಾಗಿ ಬ್ರಿಟಿಷರ ನಿದ್ದೆಗೆಡಿಸಿ ಅವರ ವಿರುದ್ಧ ಹೋರಾಡಿದ ವೀರ ಸೇನಾನಿ. ಸ್ವಾತಂತ್ರ್ಯದ ಸಲುವಾಗಿ ಹೋರಾಡಿ ಮಡಿದ ಕ್ರಾಂತಿವೀರರಾದ ಅವರ ಆದರ್ಶಗಳನ್ನು ಯುವಕರು ಪಾಲಿಸಬೇಕು ಎಂದರು.

ADVERTISEMENT

ಬಸನಗೌಡ ಜಡಿ, ಶಿವರಾಜ್ ಬಾಗೂರು, ತಿಮ್ಮಣ್ಣ ಕಡೆಚೂರ, ಮಲ್ಲಣ್ಣ ನೀಲಹಳ್ಳಿ, ಫಯಾಜ್ ನಾಯ್ಕೋಡಿ, ಅಬ್ದುಲ್ ಚಿಗಾನೂರ, ದೇವು ಜಡಿ, ಗುರುನಾಥ್ ನಾಟೇಕರ್, ಭೀಮಣ್ಣ ಬೂದಿಹಾಳ, ಮಹಿಬೂಬ ಖುರೇಷಿ, ಶರಣು ಕುರಿ, ಹೊನ್ನಪ್ಪ ಹೊರಟುರು, ಮರಲಿಂಗ ಗೋನಾಲ, ಶಿವು ಗೋನಾಲ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.