ಯಾದಗಿರಿ: ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಆರತಿ ಬೆಳಗಿ ಪುಷ್ಪಾರ್ಚನೆ ಮಾಡುವ ಮೂಲಕ ಶನಿವಾರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
ವಾಲ್ಮೀಕಿಯವರ ಆದರ್ಶಗಳನ್ನು ಪಾಲನೆ ಮಾಡಲು ಕರೆ ನೀಡಲಾಯಿತು.
ಈ ವೇಳೆ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಮುಕ್ಕಣ್ಣ ಕರಿಗಾರ, ಲೆಕ್ಕಾಧಿಕಾರಿ ವೆಂಕಟೇಶ, ಅಧೀಕ್ಷಕ ಅಶೋಕ ಕಲಾಲ್, ಮನರೆಗಾದ ಅಧಿಕಾರಿ ಬಸವಲಿಂಗ ಸೇರಿದಂತೆ ಜಿಲ್ಲಾ ಪಂಚಾಯಿತಿ ಸಿಬ್ಬಂದಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.