ಯಾದಗಿರಿ: ವಿಧಾನ ಪರಿಷತ್ (ಸ್ಥಳೀಯ ಸಂಸ್ಥೆ) ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರಿಂದ ಕಾರ್ಯಕರ್ತರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.
ಜಿಲ್ಲಾ ಬಿಜೆಪಿ ಮುಖಂಡರು ಕಲಬುರಗಿಯಲ್ಲಿ ಅಭ್ಯರ್ಥಿ ಬಿ.ಜಿ.ಪಾಟೀಲ ಅವರನ್ನು ಸನ್ಮಾನಿಸಿದರು.
ಧಾರವಾಡ–ಹಾವೇರಿ–ಗದಗ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ್ ಗೆಲುವು ಸಾಧಿಸಿದ ಕಾರಣ ಶಹಾಪುರ ತಾಲ್ಲೂಕಿನ ದೋರನಹಳ್ಳಿ ಗ್ರಾಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸಿದರು.
ಕೆಪಿಸಿಸಿ ಕಿಸಾನ್ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜ್ ಮೈನೋದ್ಧೀನ್ ಜಮಾದಾರ್, ನಾಗಯ್ಯ ಗುತ್ತೇದಾರ ವಕೀಲ, ಗ್ರಾ.ಪಂ. ಸದಸ್ಯ ಹುಸೇನಸಾಬ್, ಗ್ರಾ.ಪಂ. ಮಾಜಿ ಸದಸ್ಯ ಶರಣು ಬಿರಾಳ, ಹಳ್ಳೇಪ್ಪ ಹುಡೇದ್, ಗಜಪ್ಪ ದೇಸಾಯಿ, ಯಲ್ಲಪ್ಪ ಹುಡೇದ್, ಯಂಕಪ್ಪ ತಂಗಡಗಿ, ಮಲ್ಲು, ರಾಯಪ್ಪ ಕೊಂಬಿನ್, ಮಲ್ಲು ಉಕ್ಕಿನಾಳ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.