ಯಾದಗಿರಿ: ನಗರದ ದೊಡ್ಡಕೆರೆ ಬಳಿ ನಡೆಯುತ್ತಿರುವ ಹೂಳೆತ್ತುವ ಕಾಮಗಾರಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ರಾಜಶೇಖರ ಬಿ.ಪಾಟೀಲ ಅಧಿಕಾರಿಗಳೊಂದಿಗೆ ವೀಕ್ಷಿಸಿದರು.
ಬಿಜೆಎಸ್ ವತಿಯಿಂದ ನಡೆಯುತ್ತಿರುವ ಹೂಳೆತ್ತುವ ಕಾಮಗಾರಿ ವೀಕ್ಷಿಸಿ ಕಾಮಗಾರಿಯನ್ನು ಶೀಘ್ರ ಮುಗಿಸಲು ಅಧಿಕಾರಿಗಳಿಗೆ ಸೂಚಿಸಿದರು.
ನಂತರ ಗುರುಸಣಗಿ ಬ್ಯಾರೇಜ್ ಜಾಕ್ವೆಲ್ ಮತ್ತು ಪ್ಲಾಂಟೇಷನ್ಗೆ ಭೇಟಿ ನೀಡಿ ಪರಿಶೀಲಿಸಿದರು.
ಶಾಸಕ ಶರಣ ಬಸಪ್ಪ ದರ್ಶನಾಪುರ, ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್, ಜಿಲ್ಲಾ ಪಂಚಾಯಿತಿ ಸಿಇಒ ಕವಿತಾ ಮನ್ನೀಕೇರಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.