ಹುಣಸಗಿ: ತಾಲ್ಲೂಕಿನ ರಾಜನಕೋಳುರ ಗ್ರಾಮದಲ್ಲಿ ಹಳೆಯ ನೀರಿನ ಟ್ಯಾಂಕ್ ತೆರವುಗೊಳಿಸುವ ಸಂದರ್ಭದಲ್ಲಿ ವ್ಯಕ್ತಿಯೊರ್ವ ಮೃತಪಟ್ಟ ಘಟನೆ ಭಾನುವಾರ ನಡೆದಿದೆ.
ತಾಳಿಕೋಟೆ ಮೂಲದ ಖಾಸಗಿ ಗುತ್ತಿಗೆದಾರರಿಂದ ಗ್ರಾಮದಲ್ಲಿರುವ ಹಳೆಯ ನೀರಿನ ಟ್ಯಾಂಕ್ ತೆರವುಗೊಳಿಸುವ ಕಾರ್ಯ ನಡೆದ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಮೃತನನ್ನು ಪಶ್ಚಿಮ ಬಂಗಾಳದ ಕಬೀರ್ (30) ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಹುಣಸಗಿ ಸಿಪಿಐ ಪಂಡೀತ್ ಸಗರ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.