ADVERTISEMENT

ನೀರಿನ ಟ್ಯಾಂಕ್ ತೆರವು: ಅವಶೇಷದಡಿ ಸಿಲುಕಿ ಯುವಕ ಸಾವು

​ಪ್ರಜಾವಾಣಿ ವಾರ್ತೆ
Published 7 ಜುಲೈ 2019, 12:53 IST
Last Updated 7 ಜುಲೈ 2019, 12:53 IST
ಹುಣಸಗಿ ತಾಲ್ಲೂಕಿನ ರಾಜನಕೋಳುರ ಗ್ರಾಮದಲ್ಲಿ ಹಳೆಯ ನೀರಿನ ಟ್ಯಾಂಕ್ ಕುಸಿದಿರುವುದು
ಹುಣಸಗಿ ತಾಲ್ಲೂಕಿನ ರಾಜನಕೋಳುರ ಗ್ರಾಮದಲ್ಲಿ ಹಳೆಯ ನೀರಿನ ಟ್ಯಾಂಕ್ ಕುಸಿದಿರುವುದು   

ಹುಣಸಗಿ: ತಾಲ್ಲೂಕಿನ ರಾಜನಕೋಳುರ ಗ್ರಾಮದಲ್ಲಿ ಹಳೆಯ ನೀರಿನ ಟ್ಯಾಂಕ್ ತೆರವುಗೊಳಿಸುವ ಸಂದರ್ಭದಲ್ಲಿ ವ್ಯಕ್ತಿಯೊರ್ವ ಮೃತಪಟ್ಟ ಘಟನೆ ಭಾನುವಾರ ನಡೆದಿದೆ.

ತಾಳಿಕೋಟೆ ಮೂಲದ ಖಾಸಗಿ ಗುತ್ತಿಗೆದಾರರಿಂದ ಗ್ರಾಮದಲ್ಲಿರುವ ಹಳೆಯ ನೀರಿನ ಟ್ಯಾಂಕ್ ತೆರವುಗೊಳಿಸುವ ಕಾರ್ಯ ನಡೆದ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಮೃತನನ್ನು ಪಶ್ಚಿಮ ಬಂಗಾಳದ ಕಬೀರ್ (30) ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಹುಣಸಗಿ ಸಿಪಿಐ ಪಂಡೀತ್ ಸಗರ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.