ಸುರಪುರ: ತಾಲ್ಲೂಕಿನ ಸತ್ಯಂಪೇಟೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಜಯ ಕರ್ನಾಟಕ ಜನಪರ ವೇದಿಕೆಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗುರುವಾರ ಸಸಿ ನೆಡುವ ಮೂಲಕ ಸಿಂಧೂರ ವನ ಎಂಬ ಕಾರ್ಯಕ್ರಮ ಆಚರಿಸಲಾಯಿತು.
ಸಂಘಟನೆಯ ಜಿಲ್ಲಾ ಕಾರ್ಯಾಧ್ಯಕ್ಷ ರವಿ ನಾಯಕ ಬೈರಿಮಡ್ಡಿ ಮಾತನಾಡಿ, ‘ಕೇಂದ್ರ ಸರ್ಕಾರ ಆಪರೇಷನ್ ಸಿಂಧೂರದ ಮೂಲಕ ಉಗ್ರರ ದಮನ ಮಾಡಿದೆ. ದಾಳಿ ವೇಳೆ ಹುತಾತ್ಮರಾದ ವೀರ ಯೋಧರ ಮತ್ತು ಉಗ್ರರ ದಾಳಿಯಲ್ಲಿ ಮಡಿದ ಭಾರತೀಯರಿಗೆ ಗೌರವ ಸೂಚಿಸುವ ಉದ್ದೇಶದಿಂದ ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತಿದೆ’ ಎಂದರು.
ತಾಲ್ಲೂಕು ಸಮಿತಿ ಅಧ್ಯಕ್ಷ ಗೋಪಾಲ ನಾಯಕ, ಶಾಲೆಯ ಮುಖ್ಯ ಶಿಕ್ಷಕ ಮಹಾದೇವ, ಸಹ ಶಿಕ್ಷಕಿ ಪಿಡ್ಡಮ್ಮ ನಾಯಕ, ನಿವೃತ್ತ ಪ್ರಾಂಶುಪಾಲ ವಾಸುದೇವ ಗಂಗಿ, ಮಾಜಿ ನಗರಸಭೆ ಸದಸ್ಯ ವೆಂಕಟೇಶ ಶುಕ್ಲಾ, ಪ್ರೌಢಶಾಲೆಯ ಮುಖ್ಯ ಶಿಕ್ಷಕ ಹಣಮಂತ್ರಾಯ ಚಂದ್ಲಾಪುರ, ವಿರೂಪಾಕ್ಷಿ ನಾಯಕ, ಶಿವರಾಜ ನಾಯಕ, ಪಿಡಿಒ ಮಲ್ಲಿಕಾರ್ಜುನ ಬೇವಿನಾಳ, ಶಿವಮೂರ್ತಿ ದಿವಳಗುಡ್ಡ, ಭೀಮಣ್ಣ ಲಕ್ಷ್ಮೀಪುರ ಮತ್ತು ವಿದ್ಯಾರ್ಥಿಗಳಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.