ADVERTISEMENT

ಯಾದಗಿರಿ | ಸಚಿವರ ಆಗಮನ ವಿಳಂಬ: ಕಾರ್ಯಕ್ರಮಕ್ಕೂ ಮುನ್ನ ಫಲಾನುಭವಿಗಳಿಗೆ ಊಟ

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2023, 6:57 IST
Last Updated 14 ಮಾರ್ಚ್ 2023, 6:57 IST
   

ಯಾದಗಿರಿ: ವಿವಿಧ ಇಲಾಖೆಗಳ ಫಲಾನುಭವಿಗಳಿಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿರುವ ಸಮಾವೇಶ ಮುಂಚಿತವಾಗಿ ಊಟದ ವ್ಯವಸ್ಥೆ ಮಾಡಲಾಗಿದೆ.

ಸಮಾವೇಶ ಬೆಳಿಗ್ಗೆ 11 ಗಂಟೆಗೆ ಕೇಂದ್ರ ಸಚಿವ ಭಗವಂತ ಖೂಬಾ ಅವರು ಉದ್ಘಾಟನೆ ಮಾಡಬೇಕಿತ್ತು.‌ ಆದರೆ, ಸಮಾವೇಶ ಮಧ್ಯಾಹ್ನ 12 ಗಂಟೆಯಾದರೂ ಆರಂಭವಾಗದ ಕಾರಣ ಜಿಲ್ಲೆಯ ವಿವಿಧ ಕಡೆಯಿಂದ ಬಸ್ ಮೂಲಕ ಆಗಮಿಸಿದ ಫಲಾನುಭವಿಗಳನ್ನು ಊಟಕ್ಕೆ ಕಳುಹಿಸಲಾಯಿತು.

ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್, ಸ್ಥಳೀಯ ಶಾಸಕ ವೆಂಕಟರೆಡ್ಡಿ ಮುದ್ನಾಳ ಸೇರಿದಂತೆ ಇನ್ನಿತರ ಜನಪ್ರತಿನಿಧಿಗಳು ಭಾಗವಹಿಸುತ್ತಿದ್ದಾರೆ.

ADVERTISEMENT

ಜಿಲ್ಲಾ ಕ್ರೀಡಾಂಗಣದಲ್ಲಿ ವಿವಿಧ ಇಲಾಖೆಯ ಮಳಿಗೆಗಳನ್ನು ಹಾಕಲಾಗಿದೆ.‌ ಆಯಾ ಇಲಾಖೆಯ ಕರಪತ್ರಗಳನ್ನು ಮುದ್ರಿಸಿ ಸಾರ್ವಜನಿಕರಿಗೆ ನೀಡುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.