ADVERTISEMENT

ಯಾದಗಿರಿ: ಹಾಸ್ಟೆಲ್‍ಗಳಿಗೆ ಸಚಿವ ಭೇಟಿ, ಪರಿಶೀಲನೆ

ವಿದ್ಯಾರ್ಥಿಗಳ ಜೊತೆ ಸಮಾಲೋಚನೆ; ಗುಣಮಟ್ಟದ ಕಾಮಗಾರಿ ಮಾಡಲು ಸೂಚನೆ

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2021, 4:07 IST
Last Updated 28 ಸೆಪ್ಟೆಂಬರ್ 2021, 4:07 IST
ಯಾದಗಿರಿಯ ಮಲ್ಲಪ್ಪ ಲೇಔಟ್‍ನಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಬಾಲಕಿಯರ ಹಾಸ್ಟೆಲ್‍ಗೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಭೇಟಿ ನೀಡಿ ವಿದ್ಯಾರ್ಥಿಗಳ ಜೊತೆ ಸಮಾಲೋಚಿಸಿದರು. ಶಾಸಕ ವೆಂಕಟರೆಡ್ಡಿ ಮುದ್ನಾಳ, ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆರ್, ಇದ್ದರು
ಯಾದಗಿರಿಯ ಮಲ್ಲಪ್ಪ ಲೇಔಟ್‍ನಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಬಾಲಕಿಯರ ಹಾಸ್ಟೆಲ್‍ಗೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಭೇಟಿ ನೀಡಿ ವಿದ್ಯಾರ್ಥಿಗಳ ಜೊತೆ ಸಮಾಲೋಚಿಸಿದರು. ಶಾಸಕ ವೆಂಕಟರೆಡ್ಡಿ ಮುದ್ನಾಳ, ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆರ್, ಇದ್ದರು   

ಯಾದಗಿರಿ: ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಸೋಮವಾರ ನಗರದ ವಿವಿಧ ಹಾಸ್ಟೆಲ್, ವಸತಿ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಗರದ ಮಲ್ಲಪ್ಪ ಲೇಔಟ್‍ನಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಬಾಲಕಿಯರ ಹಾಸ್ಟೆಲ್‍ಗೆ ಭೇಟಿ ನೀಡಿದರು. ವಿವಿಧ ವಿಭಾಗಗಳಿಗೆ, ಕೊಠಡಿಗಳಿಗೆ ತೆರಳಿದ ಸಚಿವರು, ಸೌಲಭ್ಯಗಳನ್ನು ಪರಿಶೀಲಿಸಿದರು. ವಿದ್ಯಾರ್ಥಿಗಳು ಹಾಗೂ ಹಾಸ್ಟೆಲ್ ಸಿಬ್ಬಂದಿಗಳೊಂದಿಗೆ ಸಮಾಲೋಚನೆ ನಡೆಸಿದ ಸಚಿವರು, ಬಳಿಕ ಹಾಸ್ಟೆಲ್‍ನಲ್ಲಿ ಬೆಳಿಗ್ಗಿನ ಉಪಹಾರ ಮಾಡಿದರು.

ನಂತರ ಮುಂಡರಗಿಯಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಗೆ ಭೇಟಿ ನೀಡಿದ ಸಚಿವರು ಕಂಪ್ಯೂಟರ್ ಪ್ರಯೋಗಾಲಯ ಉದ್ಘಾಟಿಸಿದರು. ಅಲ್ಲಿನ ವಿವಿಧ ತರಗತಿಗಳಿಗೆ ತೆರಳಿ ವಿದ್ಯಾರ್ಥಿಗಳೊಂದಿಗೆ ಸಮಾಲೋಚಿ ಸಿದರು. ವಿದ್ಯಾರ್ಥಿಗಳಿಗೆ ಸಿಗುತ್ತಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.