
ಪ್ರಜಾವಾಣಿ ವಾರ್ತೆ
ಸುರಪುರ: ನಗರದ ಗಂಗಾಧರ್ ಹುಲಕಲ್ ಡೋಹರ ಕಕ್ಕಯ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ನೆಲಮಂಗಲದ ಬಸವಣ್ಣ ದೇವರ ಮಠದಲ್ಲಿ ಫೆ. 2 ರಂದು ಬೆಳಿಗ್ಗೆ 10.30 ಕ್ಕೆ ಬಸವಣ್ಣ ದೇವರಮಠ ಮತ್ತು ವೀರಶೈವ ಲಿಂಗಾಯತ ನಿವೃತ್ತ ನೌಕರರ ಕ್ಷೇಮಾಭಿವೃದ್ಧಿ ಸಂಘದ ಸಹಯೋಗದೊಂದಿಗೆ ಮಡಿವಾಳ ಮಾಚಿದೇವ ಮತ್ತು ಡೋಹರ ಕಕ್ಕಯ್ಯ ಜಯಂತಿ ನಿಮಿತ್ತವಾಗಿ ಹಮ್ಮಿಕೊಂಡಿರುವ ಶರಣ ಸಂಸ್ಕೃತಿ ಅಭಿಯಾನದಲ್ಲಿ ಗಂಗಾಧರ್ ಹುಲಕಲ್ಗೆ ಡೋಹರ ಕಕ್ಕಯ್ಯ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಆಯೋಜಕರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.