ADVERTISEMENT

ಯರಗೋಳ: 20 ಮಕ್ಕಳು ಶಾಲೆಗೆ ದಾಖಲು

ಟಂಟಂಗಳಲ್ಲಿ ಜನರ ಸಾಗಣೆ:3 ವಾಹನ ಜಪ್ತಿ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2019, 15:21 IST
Last Updated 12 ಡಿಸೆಂಬರ್ 2019, 15:21 IST
ಯರಗೋಳ ಹೊರವಲಯದಲ್ಲಿ ಸಾಗಣೆ ಮಾಡುತ್ತಿದ್ದ ಟ್ರ್ಯಾಕ್ಟರ್‌ಗಳನ್ನು ಅಧಿಕಾರಿಗಳು ಜಪ್ತಿ ಮಾಡಿದರು
ಯರಗೋಳ ಹೊರವಲಯದಲ್ಲಿ ಸಾಗಣೆ ಮಾಡುತ್ತಿದ್ದ ಟ್ರ್ಯಾಕ್ಟರ್‌ಗಳನ್ನು ಅಧಿಕಾರಿಗಳು ಜಪ್ತಿ ಮಾಡಿದರು   

ಯರಗೋಳ: ಗ್ರಾಮದಲ್ಲಿ ಗ್ರಾಮೀಣ ಪೊಲೀಸ್ ಠಾಣೆ ಅಧಿಕಾರಿಗಳು, ಬಾಲ ಕಾರ್ಮಿಕ ಇಲಾಖೆ, ಕಾರ್ಮಿಕ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ ಹಾಗೂ ಇತರೆ ಇಲಾಖೆ ಅಧಿಕಾರಿಗಳು ಅನಿರೀಕ್ಷಿತ ದಾಳಿ ನಡೆಸಿ, ಶಾಲೆಬಿಟ್ಟ ಮಕ್ಕಳ ತಪಾಸಣೆ ನಡೆಸಿದರು.

ಈ ಸಂದರ್ಭದಲ್ಲಿ ಪತ್ತೆಯಾದ 6ರಿಂದ 18 ವರ್ಷದೊಳಗಿನ ಮಕ್ಕಳಲ್ಲಿ ತನಿಖೆ ನಡೆಸಿ 20 ಮಕ್ಕಳ ವರದಿಯನ್ನು ಪಡೆದು ಶಾಲೆಗೆ ದಾಖಲಿಸಿದ್ದಾರೆ.

ಅನಿರೀಕ್ಷಿತ ದಾಳಿ ಮಾಡಿದಾಗ 1 ಟ್ರ್ಯಾಕ್ಟರ್, 2 ಟಂಟಂ ವಾಹನಗಳಲ್ಲಿ ಸುಮಾರು 80ಕ್ಕೂ ಹೆಚ್ಚು ಜನರನ್ನು ಕರೆದುಕೊಂಡು ಹೋಗುತ್ತಿರುವುದು ಕಂಡುಬಂದಿದೆ. ಪೊಲೀಸ್ ಇಲಾಖೆಯವರು ವಾಹನಗಳನ್ನು ಜಪ್ತಿ ಮಾಡಿ ಪ್ರತಿಯೊಂದು ವಾಹನಕ್ಕೆ ದಂಡ ವಿಧಿಸುವುದರ ಜತೆಗೆ 1988ರ ಮೋಟಾರು ವಾಹನ ಕಾಯ್ದೆಯಡಿಯಲ್ಲಿ ಸಂಬಂಧಿಸಿದ ವಾಹನ ಚಾಲಕರಿಗೆ ಚಾಲನೆ ಪರವಾನಿಗೆಯನ್ನು ರದ್ದುಪಡಿಸಲು ಕ್ರಮ ಕೈಗೊಂಡಿದ್ದಾರೆ.

ADVERTISEMENT

ಕಾರ್ಮಿಕ ಇಲಾಖೆಯ ನಿರೀಕ್ಷಕ ಶಿವಶಂಕರ ಬಿ.ತಳವಾರ ಮಾತನಾಡಿ, ಜಿಲ್ಲೆ ಮತ್ತು ತಾಲ್ಲೂಕಿನಾದ್ಯಂತ ಹೆಚ್ಚುವರಿ ನಿರೀಕ್ಷಕರಾಗಿ ನೇಮಕಗೊಂಡಿರುವ ಅಧಿಕಾರಿಗಳೊಂದಿಗೆ ತನಿಖಾ ತಂಡಗಳನ್ನು ರಚಿಸಿಕೊಂಡು ದಾಳಿ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ದಾಳಿಯಲ್ಲಿ ಜಿಲ್ಲಾ ಬಾಲಕಾರ್ಮಿಕ ಇಲಾಖೆಯ ಯೋಜನಾ ನಿರ್ದೇಶಕ ರಘುವೀರ ಸಿಂಗ್ ಠಾಕೂರ್,ಎಎಸ್‌ಐ ವಿಠ್ಠಲ್, ಹೆಡ್‌ಕಾನ್‌ಸ್ಟೆಬಲ್ ಗುರುನಾಥ ರೆಡ್ಡಿ, ಮಕ್ಕಳ ಸಹಾಯವಾಣಿಯ ನಾಗಪ್ಪ, ಡಿಸಿಪಿಯು ಘಟಕದ ಸಿಬ್ಬಂದಿ ದೇವಪ್ಪ, ಕಾರ್ಮಿಕ ಇಲಾಖೆಯ ಚಂದ್ರಶೇಖರ ಹಾಗೂ ಶಿಕ್ಷಣ ಇಲಾಖೆ ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.