ADVERTISEMENT

ರೈಲಿನಿಂದ ಬಿದ್ದು ಯುವಕ ಸಾವು

​ಪ್ರಜಾವಾಣಿ ವಾರ್ತೆ
Published 25 ಮೇ 2019, 15:25 IST
Last Updated 25 ಮೇ 2019, 15:25 IST

ಯಾದಗಿರಿ: ಯಾದಗಿರಿ–ಲಿಂಗೇರಿ ರೈಲ್ವೆ ನಿಲ್ದಾಣದ ಮಧ್ಯೆ ಯುವಕನೊಬ್ಬ ಆಕಸ್ಮಿಕವಾಗಿ ರೈಲಿನಿಂದ ಕಾಲು ಜಾರಿ ಬಿದ್ದು ಮೃತಪಟ್ಟರುವ ಘಟನೆ ಶುಕ್ರವಾರ ಮಧ್ಯರಾತ್ರಿ ಸಂಭವಿಸಿದೆ.

ತಾಲ್ಲೂಕಿನ ಕೊಂಕಲ್ ಗ್ರಾಮದ ಮೋಹನ್ (22)ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ.

ಶುಕ್ರವಾರ ರಾತ್ರಿ ಬೆಂಗಳೂರಿಗೆ ತೆರಳುವ ವೇಳೆ ರೈಲಿನ ಬಾಗಿಲ ಬಳಿ ನಿಂತು ಆಯಾ ತಪ್ಪಿ ಬಿದ್ದಿರಬಹುದು ಎಂದು ರೈಲ್ವೆ ಪೊಲೀಸರು ಶಂಕಿಸಿದ್ದಾರೆ. ಈ ಕುರಿತು ರಾಯಚೂರಿನ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.