ADVERTISEMENT

ನಾಲ್ವರಿಗೆ ಯುವ ವಿಜ್ಞಾನಿ ಪ್ರಶಸ್ತಿ

ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನಿಂದ ರಾಜ್ಯಮಟ್ಟದ ಯುವ ವಿಜ್ಞಾನಿಗಳ ಸಮಾವೇಶ

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2021, 21:17 IST
Last Updated 14 ಮಾರ್ಚ್ 2021, 21:17 IST
ಸೈದಾಪುರದಲ್ಲಿ ಭಾನುವಾರ ನಡೆದ ರಾಜ್ಯಮಟ್ಟದ ಯುವ ವಿಜ್ಞಾನಿಗಳ ಸಮಾವೇಶದಲ್ಲಿ ಯಶಸ್ವಿ ಶೆಟ್ಟಿ, ವೈ.ಹಿ.ಯೋಗಪ್ರಿಯ, ಸುಮೇಧ ಎಸ್.ಎಸ್ ಮತ್ತು ಕಾರ್ತಿಕ ಮೋಹನಲಾಲ್ ಅವರಿಗೆ ಯುವ ವಿಜ್ಞಾನಿ ಪ್ರಶಸ್ತಿ ಪ್ರದಾನ ಮಾಡಲಾಯಿತು
ಸೈದಾಪುರದಲ್ಲಿ ಭಾನುವಾರ ನಡೆದ ರಾಜ್ಯಮಟ್ಟದ ಯುವ ವಿಜ್ಞಾನಿಗಳ ಸಮಾವೇಶದಲ್ಲಿ ಯಶಸ್ವಿ ಶೆಟ್ಟಿ, ವೈ.ಹಿ.ಯೋಗಪ್ರಿಯ, ಸುಮೇಧ ಎಸ್.ಎಸ್ ಮತ್ತು ಕಾರ್ತಿಕ ಮೋಹನಲಾಲ್ ಅವರಿಗೆ ಯುವ ವಿಜ್ಞಾನಿ ಪ್ರಶಸ್ತಿ ಪ್ರದಾನ ಮಾಡಲಾಯಿತು   

ಸೈದಾಪುರ (ಯಾದಗಿರಿ ಜಿಲ್ಲೆ): ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ವತಿಯಿಂದ ಭಾನುವಾರ ಇಲ್ಲಿ ನಡೆದ ರಾಜ್ಯಮಟ್ಟದ ಯುವ ವಿಜ್ಞಾನಿಗಳ ಸಮಾವೇಶದಲ್ಲಿ ನಾಲ್ವರು ವಿದ್ಯಾರ್ಥಿಗಳಿಗೆ 2020–21ನೇ ಸಾಲಿನ ಯುವ ವಿಜ್ಞಾನಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ದಾವಣಗೆರೆಯ ಕೇಂದ್ರೀಯ ವಿದ್ಯಾಲಯದ ವೈ.ಹಿ.ಯೋಗಪ್ರಿಯ, ದಕ್ಷಿಣ ಕನ್ನಡ ಜಿಲ್ಲೆಯ ವಿವೇಕಾನಂದ ಇಂಗ್ಲಿಷ್ ಮಾಧ್ಯಮ ಶಾಲೆಯ ಯಶಸ್ವಿ ಶೆಟ್ಟಿ, ಬಳ್ಳಾರಿಯ ಜಿಂದಾಲ್ ವಿದ್ಯಾಮಂದಿರದ ಸುಮೇಧ ಎಸ್.ಎಸ್ ಮತ್ತು ಗದಗ್‌ನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕಾರ್ತಿಕ ಮೋಹನಲಾಲ್ ಅವರು ಪ್ರಶಸ್ತಿ ಸ್ವೀಕರಿಸಿದರು.

ರಾಜ್ಯದ ವಿವಿಧ ಜಿಲ್ಲೆಗಳ 66 ವಿದ್ಯಾರ್ಥಿಗಳು ವಿಜ್ಞಾನ ಅನ್ವೇಷಣೆಯ ಮಾದರಿಗಳನ್ನು ಪ್ರದರ್ಶಿಸಿದರು. ಅಂತಿಮ ಹಂತಕ್ಕೆ ಆಯ್ಕೆಯಾದ 12 ವಿದ್ಯಾರ್ಥಿಗಳ ಮಾದರಿಗಳನ್ನು 8 ಮಂದಿ ತಜ್ಞರು ಪರೀಶೀಲಿಸಿದರು. ಲಿಖಿತ ಪರೀಕ್ಷೆ ಜೊತೆ ಸಂದರ್ಶನ ನಡೆಸಿ ನಾಲ್ವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದರು. ಅವರಿಗೆ ತಲಾ ₹10 ಸಾವಿರ ನಗದು ಮತ್ತು ಪ್ರಶಸ್ತಿ ಪತ್ರವನ್ನು ಭಾರತೀಯ ವಿಜ್ಞಾನ ಸಂಸ್ಥೆ ನಿವೃತ್ತ ವಿಜ್ಞಾನಿ ಡಾ.ಎಚ್.ಎಲ್.ಭಟ್ ವಿತರಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.