ಕಡೇಚೂರು (ಸೈದಾಪುರ): ಯಾದಗಿರಿ ತಾಲ್ಲೂಕಿನ ಕಡೇಚೂರು ಹೊರ ವಲಯದಲ್ಲಿ ಯುವಕನ ಕೊಲೆ ಮಾಡಿದ ಘಟನೆ ಸೋಮವಾರ
ನಡೆದಿದೆ.
ಯಲಸತ್ತಿ ಗ್ರಾಮದ ನಿವಾಸಿ ಸಿದ್ಧಾರ್ಥ ಗೌಡ(28) ಕೊಲೆಯಾದ ಯುವಕ.
ಬೆಂಗಳೂರಿನಲ್ಲಿ ಪರಿಚಯ ಆಗಿದ್ದ ವಿವಾಹಿತ ಮಹಿಳೆಯೊಬ್ಬರನ್ನು ಮಾತನಾಡಿಸಲು ಕಡೇಚೂರಿಗೆ ತೆರಳಿದ್ದ. ಇದನ್ನು ಸಹಿಸದ ಆಕೆಯ ಸಹೋದರರು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ ಯುವಕನ ತಂದೆ ದೂರುನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರಿಗೆ ಕೆಲಸಕ್ಕೆ ಹೋಗಿದ್ದ ಸಿದ್ಧಾರ್ಥ, ಅಲ್ಲಿಯೇ ಪತಿಯಿಂದ ದೂರವಾಗಿದ್ದ ಮಹಿಳೆಯ ಪರಿಚಯವಾಗಿತ್ತು. ಆ ಬಳಿಕ ಕೆಲವು ಆಪ್ತರ ಸಮ್ಮುಖದಲ್ಲಿ ಮದುವೆ ಸಹ ಆಗಿದ್ದ. ಇದನ್ನು ಅರಿತ ಮಹಿಳೆಯ ಸಂಬಂಧಿಕರು ಆಕೆಯನ್ನು ಗ್ರಾಮಕ್ಕೆ ಕರೆತಂದರು. ಮಹಿಳೆಯನ್ನು ಮಾತ ನಾಡಿಸಲು ಕಡೇಚೂರಿಗೆ ಹೋಗಿ ದ್ದಾಗ ಆಕೆಯ ಪತಿ ಹಾಗೂ ಸಹೋದರರು ಕೊಲೆ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ ಎಂದರು.
ಪ್ರಕರಣ ಸಂಬಂಧ ಒಬ್ಬ ಕೊಲೆಯ ಆರೋಪಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದುಹೇಳಿದ್ದಾರೆ.
ಸೈದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.