ಉಡುಪಿ: ತೆಂಕನಿಡಿಯೂರು ಗ್ರಾಮದ ಲಕ್ಷ್ಮೀ ನಗರದಲ್ಲಿ ಜುಲೈ 6ರಂದು ನಡೆದ ಯೋಗೀಶ್ ಕೊಲೆ ಪ್ರಕರಣದ ಆರೋಪಿ ಅನೂಪ್ ಕುಂದರ್ ಎಂಬಾತನನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ.
‘ಸಂತೆಕಟ್ಟೆಯಲ್ಲಿ ಆರೋಪಿ ಅವಿತಿರುವ ಖಚಿತ ಮಾಹಿತಿ ಕಲೆಹಾಕಿದ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ತಲೆಮರೆಸಿಕೊಂಡಿದ್ದು, ಬಂಧನಕ್ಕೆ ಶೋಧ ನಡೆಯುತ್ತಿದೆ’ ಎಂದು ಮಲ್ಪೆ ಠಾಣೆ ಪೊಲೀಸರು ತಿಳಿಸಿದ್ದಾರೆ.
ಯೋಗೀಶ್ ಕೊಲೆ ಪ್ರಕರಣದಲ್ಲಿ ಈಗಾಗಲೇರೋಹಿತ್ ಪಿಂಟೊ, ಸುಜಿತ್ ಪಿಂಟೊ, ಪ್ರದೀಪ್, ವಿನಯ್ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.