ADVERTISEMENT

ಯೋಗೀಶ್ ಕೊಲೆ ಪ್ರಕರಣ: ಮತ್ತೊಬ್ಬ ಬಂಧನ

ಬಂಧಿತರ ಸಂಖ್ಯೆ 5ಕ್ಕೇರಿಕೆ: ಇನ್ನೊಬ್ಬ ಆರೋಪಿಗೆ ಶೋಧ

​ಪ್ರಜಾವಾಣಿ ವಾರ್ತೆ
Published 12 ಜುಲೈ 2020, 13:39 IST
Last Updated 12 ಜುಲೈ 2020, 13:39 IST

ಉಡುಪಿ: ತೆಂಕನಿಡಿಯೂರು ಗ್ರಾಮದ ಲಕ್ಷ್ಮೀ ನಗರದಲ್ಲಿ ಜುಲೈ 6ರಂದು ನಡೆದ ಯೋಗೀಶ್ ಕೊಲೆ ಪ್ರಕರಣದ ಆರೋಪಿ ಅನೂಪ್ ಕುಂದರ್ ಎಂಬಾತನನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ.

‘ಸಂತೆಕಟ್ಟೆಯಲ್ಲಿ ಆರೋಪಿ ಅವಿತಿರುವ ಖಚಿತ ಮಾಹಿತಿ ಕಲೆಹಾಕಿದ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ತಲೆಮರೆಸಿಕೊಂಡಿದ್ದು, ಬಂಧನಕ್ಕೆ ಶೋಧ ನಡೆಯುತ್ತಿದೆ’ ಎಂದು ಮಲ್ಪೆ ಠಾಣೆ ಪೊಲೀಸರು ತಿಳಿಸಿದ್ದಾರೆ.

ಯೋಗೀಶ್ ಕೊಲೆ ಪ್ರಕರಣದಲ್ಲಿ ಈಗಾಗಲೇರೋಹಿತ್ ಪಿಂಟೊ, ಸುಜಿತ್ ಪಿಂಟೊ, ಪ್ರದೀಪ್, ವಿನಯ್ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.