ADVERTISEMENT

ಉಚಿತ ಶಿಲ್ಪಕಲಾ ಶಿಕ್ಷಣ ತರಬೇತಿಗೆ ಆಹ್ವಾನ

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2019, 15:32 IST
Last Updated 15 ಏಪ್ರಿಲ್ 2019, 15:32 IST

ರಾಮನಗರ: ಕೆನರಾ ಬ್ಯಾಂಕ್ ಪ್ರಾಯೋಜಿತ ಕೆಪಿಜೆ ಪ್ರಭು ಕರಕುಶಲ ತರಬೇತಿ ಸಂಸ್ಥೆಯು ನಿರುದ್ಯೋಗಿ ಯುವಕರಿಗಾಗಿ ವಿವಿಧ ಕರಕುಶಲ ವಿಭಾಗಗಳಲ್ಲಿ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನಿಸಿದೆ.

ಮರ ಮತ್ತು ಕಲ್ಲು ಕೆತ್ತನೆ, ಲೋಹ ಶಿಲ್ಪ ವಿಭಾಗದ ತರಬೇತಿ ಅವಧಿಯು 18 ತಿಂಗಳಾಗಿದ್ದು, ಕುಂಭ ಕಲೆಯ (ಟೆರ್ರಾಕೋಟ) ತರಬೇತಿಯ ಅವಧಿಯು 6 ತಿಂಗಳಾಗಿರುತ್ತದೆ. ರಾಮನಗರ ಜಿಲ್ಲೆಯ ಬಿಡದಿ ಕೈಗಾರಿಕಾ ಪ್ರದೇಶದಲ್ಲಿ ಇರುವ ಸಂಸ್ಥೆಯಲ್ಲಿ ತರಬೇತಿ ನೀಡಲಾಗುವುದು.

ತರಬೇತಿಯು ಸಂಪೂರ್ಣ ಉಚಿತವಾಗಿದ್ದು, ಊಟ ಹಾಗೂ ವ್ಯವಸ್ಥೆಯೂ ಇದೆ. ತರಬೇತಿಗೆ ಬೇಕಾದ ಕಚ್ಚಾ ಸಾಮಗ್ರಿ, ತರಬೇತಿ ಪ್ರವಾಸವು ಉಚಿತವಾಗಿ ಸಿಗಲಿದೆ.

ADVERTISEMENT

ಕನಿಷ್ಠ 7ನೇ ತರಗತಿ ಉತ್ತೀರ್ಣರಾದ , 18 ರಿಂದ 35 ವರ್ಷದ ಒಳಗಿನ ಯುವಕರು ಅರ್ಜಿ ಸಲ್ಲಿಸಬಹುದು.
ತರಬೇತಿ ಪ್ರವೇಶಕ್ಕಾಗಿ ಈ ತಿಂಗಳ 20ರಿಂದ ಮೇ 5ರವರೆಗೆ ನೇರ ಸಂದರ್ಶನವು ನಡೆಯಲಿದೆ.

ಆಸಕ್ತರು ವಿವರಗಳಿಗೆ ಎಂ, ನಾರಾಯಣಪ್ಪ, ನಿರ್ದೇಶಕರು, ಕೆನರಾ ಬ್ಯಾಂಕ್ ಪ್ರಾಯೋಜಿತ ಕೆ ಪಿ ಜೆ ಪ್ರಭು ಕರಕುಶಲ ತರಬೇತಿ ಸಂಸ್ಥೆ, ಜೋಗರದೊಡ್ಡಿ, ಬಿಡದಿ ಕೈಗಾರಿಕಾ ಪ್ರದೇಶ, ರಾಮನಗರ ಜಿಲ್ಲೆ–-562109, ವಿಳಾಸವನ್ನು ಸಂಪರ್ಕಿಸಬಹುದು.

ಮಾಹಿತಿಗೆ ಮೊಬೈಲ್‌ 9481739830, 8971253882, 9164984414 ಅಥವಾ ದೂರವಾಣಿಗೆ 080–-27287127ಗೆ ಕರೆ ಮಾಡಬಹುದು ಎಂದು ಪ್ರಕಟಣೆಯು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.