ಮಂಗಳೂರು: ‘ಕರಾವಳಿಯ ಜನರಿಗೆ ತಿಳಿವಳಿಕೆ ಇಲ್ಲ ಎಂದು ಹೇಳಿದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರೇ, ದ್ವಿತೀಯ ಪಿಯುಸಿ ಫಲಿತಾಂಶ ಒಮ್ಮೆ ನೋಡಿ. ರಾಜ್ಯದಲ್ಲೇ ಉಡುಪಿ ಪ್ರಥಮ ಸ್ಥಾನ, ದಕ್ಷಿಣ ಕನ್ನಡ ದ್ವಿತೀಯ ಸ್ಥಾನದಲ್ಲಿದ್ದು, ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಮತ್ತೊಮ್ಮೆ ಕರಾವಳಿಯ ಜಿಲ್ಲೆಗಳೇ ಮೇಲುಗೈ ಸಾಧಿಸಿವೆ’ ಎಂದು ಸಂಸದ ನಳಿನ್ಕುಮಾರ್ ಕಟೀಲ್ ಹೇಳಿದ್ದಾರೆ.
‘ಮುಖ್ಯಮಂತ್ರಿಯವರೇ ಇದೀಗ ಕ್ಷಮೆ ಕೇಳುವ ಸಮಯ ಬಂದಿದೆ’ ಎಂದು ಟ್ವಿಟರ್ನಲ್ಲಿ ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದ್ದಾರೆ.
‘ಫಲಿತಾಂಶ ನೋಡಿ. ಇದನ್ನೂ ನೋಡಿಯೂ ಉಡುಪಿ- ದಕ್ಷಿಣ ಕನ್ನಡದ ಜನಗಳು ತಿಳಿವಳಿಕೆ ಇಲ್ಲದವರೂ ಅಂತೀರಾ ?’ ಎಂದು ಪಿಯುಸಿ ಫಲಿತಾಂಶ ಪ್ರಕಟವಾದ ಬೆನ್ನಲೇ ಟ್ವೀಟ್ ಮಾಡಿರುವ ಅವರು, ಸಿಎಂ ಕರಾವಳಿಗರ ಕ್ಷಮೆಯಾಚಿಸುವಂತೆ ಆಗ್ರಹಿಸಿದ್ದಾರೆ.
ಬಿಜೆಪಿಯನ್ನು ಬೆಂಬಲಿಸುವ ಕರಾವಳಿಯ ಜನರಿಗೆ ತಿಳಿವಳಿಕೆ ಕಡಿಮೆ ಎಂದು ಕುಮಾರಸ್ವಾಮಿ ಹೇಳಿಕೆ ನೀಡಿದ್ದರು. ಸಾಮಾಜಿಕ ಜಾಲತಾಣದಲ್ಲಿ ಭಾರೀ ವಿರೋಧ ವ್ಯಕ್ತವಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.