ADVERTISEMENT

ಚಂದನದಲ್ಲಿ 29ರಿಂದ ಎಸ್ಸೆಸ್ಸೆಲ್ಸಿ ಪುನರ್‌ಮನನ ತರಗತಿ

​ಪ್ರಜಾವಾಣಿ ವಾರ್ತೆ
Published 22 ಏಪ್ರಿಲ್ 2020, 17:59 IST
Last Updated 22 ಏಪ್ರಿಲ್ 2020, 17:59 IST
ಸುರೇಶ್‌ ಕುಮಾರ್‌
ಸುರೇಶ್‌ ಕುಮಾರ್‌   

ಬೆಂಗಳೂರು: ‘ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಸಜ್ಜಾಗುತ್ತಿರುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ದೂರದರ್ಶನ ಚಂದನ ವಾಹಿನಿಯಲ್ಲಿ ಇದೇ 29ರಿಂದ ಪುನರ್‌ಮನನ ತರಗತಿಗಳನ್ನು ಆರಂಭಿಸಲಾಗುತ್ತಿದೆ’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್‌ ತಿಳಿಸಿದ್ದಾರೆ.

‘ಪ್ರತಿದಿನ ಮಧ್ಯಾಹ್ನ 3ರಿಂದ 4.30ರವರೆಗೆ ತರಗತಿಗಳು ನಡೆಯಲಿದ್ದು, ಮೊದಲ 16 ದಿನ ಪ್ರತಿ 45 ನಿಮಿಷಗಳ ಎರಡು ಅವಧಿಗಳಲ್ಲಿ ಗಣಿತ ಹಾಗೂ ವಿಜ್ಞಾನ ವಿಷಯಗಳ ಬೋಧನಾ ತರಗತಿಗಳು ನಡೆಯಲಿದ್ದು, 17ನೇ ದಿನ ಈ ಎರಡೂ ವಿಷಯಗಳ ಮಾದರಿ ಪ್ರಶ್ನೆ ಪತ್ರಿಕೆಗಳಿಗೆ ಉತ್ತರಿಸುವ ವಿಧಾನವನ್ನು ಶಿಕ್ಷಕರು ತಿಳಿಸಿಕೊಡಲಿದ್ದಾರೆ’ ಎಂದು ಅವರು ತಿಳಿಸಿದ್ದಾರೆ.

‘18ನೇ ದಿನದಿಂದ 6 ದಿನ ಸಮಾಜ ವಿಜ್ಞಾನದ ತರಗತಿಗಳು ನಡೆಯಲಿವೆ. ನಂತರದ ದಿನಗಳಲ್ಲಿ ಕನ್ನಡ ಮತ್ತು ಇಂಗ್ಲಿಷ್‌ ಭಾಷಾ ವಿಷಯಗಳ ಬೋಧನೆಯನ್ನೂ ಸಹ ಮಾಡಲಾಗುತ್ತದೆ. ಪ್ರತಿ ವಿಷಯ ಬೋಧನೆಯ ಕೊನೆಯಲ್ಲಿ ವಿಶೇಷವಾಗಿ ತಯಾರಿಸಲಾಗಿರುವ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಉತ್ತರಿಸುವ ವಿಧಾನವನ್ನು ಹೇಳಿಕೊಡಲಾಗುತ್ತದೆ’ ಎಂದು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.