ADVERTISEMENT

ಗೆಲುವಿಗೆ ನಾಗದೇವನಿಗೆ ಮೊರೆ: ಸಂಸದರಿಂದ ವಿಶೇಷ ಪೂಜೆ

​ಪ್ರಜಾವಾಣಿ ವಾರ್ತೆ
Published 30 ಏಪ್ರಿಲ್ 2019, 17:14 IST
Last Updated 30 ಏಪ್ರಿಲ್ 2019, 17:14 IST
ಬಳ್ಳಾರಿ ಜಿಲ್ಲೆಯ ಬುಕ್ಕಸಾಗರದ ಏಳುಹೆಡೆ ನಾಗದೇವ ದೇವಸ್ಥಾನದಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಂಗಣ್ಣ ಕರಡಿ ಹಾಗೂ ಪತ್ನಿ ನಿಂಗಮ್ಮ ಕರಡಿ ವಿಶೇಷ ಪೂಜೆ ಸಲ್ಲಿಸಿದರು
ಬಳ್ಳಾರಿ ಜಿಲ್ಲೆಯ ಬುಕ್ಕಸಾಗರದ ಏಳುಹೆಡೆ ನಾಗದೇವ ದೇವಸ್ಥಾನದಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಂಗಣ್ಣ ಕರಡಿ ಹಾಗೂ ಪತ್ನಿ ನಿಂಗಮ್ಮ ಕರಡಿ ವಿಶೇಷ ಪೂಜೆ ಸಲ್ಲಿಸಿದರು   

ಕೊಪ್ಪಳ: ನಾಗದೋಷ ಪರಿಹಾರಕ್ಕಾಗಿ ಹೊಸಪೇಟೆ ತಾಲ್ಲೂಕಿನ ಬುಕ್ಕಸಾಗರದ ಏಳುಹೆಡೆ ನಾಗದೇವನಿಗೆಹಾಲಿ ಸಂಸದ, ಬಿಜೆಪಿ ಅಭ್ಯರ್ಥಿ ಸಂಗಣ್ಣ ಕರಡಿ ಅವರು ಮೊರೆ ಹೋಗಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿವೈರಲ್ ಆಗಿದೆ.

ಟಿಕೆಟ್ ದೊರೆಯಲು ನಾಗದೋಷ ಕಾರಣವಾಗಿದ್ದು, ಅವರ ಪತ್ನಿ ನಿಂಗಮ್ಮ ಪರಿಹಾರಕ್ಕಾಗಿ ಹರಕೆ ಹೊತ್ತಿದ್ದರು ಎನ್ನಲಾಗಿದೆ. ಪತ್ನಿ ಸಮೇತ ಶನಿವಾರ ಬೆಳಿಗ್ಗೆ ದೇವಸ್ಥಾನದಲ್ಲಿಹಾಲಿನ ಅಭಿಷೇಕ, ವಿಶೇಷ ಪೂಜೆ ನಡೆಸಿದರು. ಅಲ್ಲದೆ ಗೆಲುವಿಗಾಗಿ ಪ್ರಾರ್ಥಿಸಿದರು ಎಂದು ತಿಳಿದು ಬಂದಿದೆ.

ಈ ಸಂದರ್ಭದಲ್ಲಿ ಸಂಗಣ್ಣ ಕರಡಿ ಅವರ ಸೊಸೆಮಂಜುಳಾ ಮತ್ತು ಕುಟುಂಬದ ಸದಸ್ಯರು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.