ಕಲಬುರ್ಗಿ: ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಸ್ಥಾನ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿರುವ ಬಾಬುರಾವ್ ಚವಾಣ್ ಅವರು ಏ.3ರಂದು ಸಂಸದ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗಲಿದ್ದಾರೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಿಜೆಪಿಯಲ್ಲಿ ಉಸಿರುಗಟ್ಟುವ ವಾತಾವರಣವಿದೆ. ಹಣ ಕೊಟ್ಟವರಿಗೆ ಮಾತ್ರ ಟಿಕೆಟ್ ಎಂಬ ವಾತಾವರಣ ಪಕ್ಷದಲ್ಲಿದೆ. ಕಾಂಗ್ರೆಸ್ ನನ್ನ ಮಾತೃ ಪಕ್ಷ. ಮರಳಿ ಬರುವಂತೆ ಮಲ್ಲಿಕಾರ್ಜುನ ಖರ್ಗೆ ಅವರು ಆಹ್ವಾನ ನೀಡಿದ್ದಾರೆ. ಹೀಗಾಗಿ, ಕಾಂಗ್ರೆಸ್ ಸೇರ್ಪಡೆ ಆಗುತ್ತಿದ್ದೇನೆ’ ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.