ಮುಜಫ್ಫರ್ನಗರ, ಉತ್ತರ ಪ್ರದೇಶ: ಲೋಕಸಭಾ ಚುನಾವಣೆ ಹೊತ್ತಿನಲ್ಲಿ ಬಿಎಸ್ಪಿ ಶಾಸಕ ಮೌಲಾನಾ ಜಮೀಲ್ ಅವರು ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದಾರೆ. ಜ್ಯೋತಿರಾದಿತ್ಯ ಸಿಂಧಿಯಾ ಅವರು ಈ ವೇಳೆ ಉಪಸ್ಥಿತರಿದ್ದರು.
ಸುದ್ದಿಗಾರರೊಂದಿಗೆ ಮಾತನಾಡಿದ ಮೌಲಾನಾ, ಬಿಜೆಪಿ ಸೋಲಿಸಲು ಕಾಂಗ್ರೆಸ್ನಿಂದ ಮಾತ್ರ ಸಾಧ್ಯ ಎಂಬುದನ್ನು ಅರಿತು ಮಾಯಾವತಿ ನೇತೃತ್ವದ ಬಿಎಸ್ಪಿ ತೊರೆದೆ ಎಂದು ಹೇಳಿದ್ದಾರೆ.
ಜಮೀಲ್ ಅವರು ಬಿಎಸ್ಪಿ ಟಿಕೆಟ್ನಡಿ 2012ರಲ್ಲಿ ಮೀರ್ಪುರ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.