ತುಮಕೂರು: ಬಿಜೆಪಿ ರಾಜ್ಯ ಘಟಕ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪಗೆ ಲೋಕಸಭಾಚುನಾವಣಾ ಭೀತಿ ಕಾಡುತ್ತಿದೆ ಎಂದು ಡಾ.ಜಿ.ಪರಮೇಶ್ವರ ಹೇಳಿದರು.
ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿ, ವಿಧಾನಸಭೆ ಚುನಾವಣೆಯಲ್ಲಿ ಗೆದ್ದುಅಧಿಕಾರಕ್ಕೆ ಬರುವ ಪ್ರಯತ್ನ ಫಲಿಸಲಿಲ್ಲ. ಮೈತ್ರಿ ಪಕ್ಷದ ಶಾಸಕರು, ಸಚಿವರನ್ನು ಸೆಳೆದು ಸರ್ಕಾರ ಬೀಳಿಸುವ ಪ್ರಯತ್ನ ಹುಸಿಯಾಯಿತು. ಈಗ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲುವ ಅವರ ಆಸೆ ನಿರಾಸೆಯಾಗಲಿದೆ. ಈಗಲೇ ಅವರಿಗೆ ಸೋಲಿನ ಭೀತಿ ಕಾಡುತ್ತಿದೆ ಎಂದರು.
ಕೆ.ಎಸ್. ಈಶ್ಚರಪ್ಪ ಅವರ ಕೀಳುಮಟ್ಟದ ಹೇಳಿಕೆಗೆ ಪ್ರತಿಕ್ರಿಯಿಸುವುದಿಲ್ಲ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.