ADVERTISEMENT

ರಾಜರಾಜೇಶ್ವರಿ ನಗರ ಉಪ ಚುನಾವಣೆ| ನಸುಕಿನಿಂದ ರಾತ್ರಿವರೆಗೂ ಕುಸುಮಾ ಮತಯಾಚನೆ

​ಪ್ರಜಾವಾಣಿ ವಾರ್ತೆ
Published 24 ಅಕ್ಟೋಬರ್ 2020, 1:58 IST
Last Updated 24 ಅಕ್ಟೋಬರ್ 2020, 1:58 IST
ಜಾಲಹಳ್ಳಿಯಲ್ಲಿ ಶುಕ್ರವಾರ ಸಂಜೆ ಮತ ಯಾಚನೆಗೆ ಬಂದ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಕುಸುಮಾ ಎಚ್‌. ಅವರನ್ನು ಮಹಿಳೆಯರು ಆರತಿ ಬೆಳಗಿ ಸ್ವಾಗತಿಸಿದರು
ಜಾಲಹಳ್ಳಿಯಲ್ಲಿ ಶುಕ್ರವಾರ ಸಂಜೆ ಮತ ಯಾಚನೆಗೆ ಬಂದ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಕುಸುಮಾ ಎಚ್‌. ಅವರನ್ನು ಮಹಿಳೆಯರು ಆರತಿ ಬೆಳಗಿ ಸ್ವಾಗತಿಸಿದರು   

ಬೆಂಗಳೂರು: ಶುಕ್ರವಾರ ನಸುಕಿನಲ್ಲೇ ಉದ್ಯಾನಗಳತ್ತ ಹೆಜ್ಜೆಹಾಕಿ ಮತಯಾಚನೆ ಆರಂಭಿಸಿದ್ದ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಕುಸುಮಾ ಎಚ್‌. ರಾತ್ರಿಯವರೆಗೂ ಪ್ರಚಾರ ನಡೆಸಿದರು.

ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಜತೆ ಬೆಳಿಗ್ಗೆಯೇ ವಿವಿಧ ಉದ್ಯಾನಗಳಿಗೆ ಭೇಟಿನೀಡಿದ ಕುಸುಮಾ, ವಾಯು ವಿಹಾರಕ್ಕೆ ಬಂದ ಮತದಾರರನ್ನು ಭೇಟಿಮಾಡಿದರು. ಹಿರಿಯರಿಗೆ ತಲೆಬಾಗಿ ನಮಸ್ಕರಿಸಿ ಮತ ಯಾಚಿಸಿದರು. ನಂತರ ಹಲವು ಸಭೆಗಳಲ್ಲಿ ಭಾಗಿಯಾದ ಅವರು, ಮನೆಮನೆ ಪ್ರಚಾರದಲ್ಲೂ ಭಾಗಿಯಾದರು.

ಆರತಿ ಬೆಳಗಿ ಸ್ವಾಗತ: ಸಂಜೆ ಜಾಲಹಳ್ಳಿ ಸುತ್ತಮುತ್ತ ಕುಸುಮಾ ಮನೆ ಮನೆ ಪ್ರಚಾರದಲ್ಲಿ ಪಾಲ್ಗೊಂಡರು. ಪಕ್ಷದ ನಾಯಕರೊಂದಿಗೆ ಜಾಲಹಳ್ಳಿಗೆ ಬಂದ ಅವರನ್ನು ಅಲ್ಲಿನ ಮಹಿಳೆಯರು ಆರತಿ ಎತ್ತಿ ಸ್ವಾಗತಿಸಿದರು.

ADVERTISEMENT

ಕುಸುಮಾ ಅವರೊಂದಿಗೆ ಶಾಸಕ ಕೃಷ್ಣ ಬೈರೇಗೌಡ, ವಿಧಾನ ಪರಿಷತ್‌ನ ಮಾಜಿ ಸದಸ್ಯ ಐವನ್‌ ಡಿಸೋಜ, ಕುಸುಮಾ ಅವರ ತಂದೆ ಹನುಮಂತರಾಯಪ್ಪ ಸೇರಿದಂತೆ ಹಲವರು ಪ್ರಚಾರದಲ್ಲಿ ಪಾಲ್ಗೊಂಡಿದ್ದರು.

ರೋಡ್‌ ಶೋ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ಮಾಜಿ ಸಚಿವರಾದ ಎನ್‌. ಚೆಲುವರಾಯಸ್ವಾಮಿ, ಪಿ.ಎಂ. ನರೇಂದ್ರಸ್ವಾಮಿ ಮತ್ತಿತರ ಮುಖಂಡರ ಜತೆಗೂಡಿ ಚೌಡೇಶ್ವರಿನಗರ, ಕೊಟ್ಟಿಗೆಪಾಳ್ಯ, ಶ್ರೀನಿವಾಸನಗರ, ಮಾಳಗಾಳದಲ್ಲಿ ರೋಡ್‌ ಶೋ ನಡೆಸಿದರು. ಕೊಟ್ಟಿಗೆಪಾಳ್ಯದಲ್ಲಿ ಬಹಿರಂಗ ಸಭೆಯಲ್ಲಿ ಮಾತನಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.