ನವದೆಹಲಿ: ನೀತಿ ಸಂಹಿತೆ ಉಲ್ಲಂಘನೆ ಕುರಿತ ದೂರಿಗೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆರೋಪ
ಮುಕ್ತಗೊಳಿಸುವ ಆಯೋಗದ ನಿರ್ಧಾರಕ್ಕೆ ಒಬ್ಬ ಸದಸ್ಯ ಒಪ್ಪಿಗೆಸೂಚಿಸಿರಲಿಲ್ಲ ಎಂದು ಮೂಲಗಳು ತಿಳಿಸಿವೆ.
ಪ್ರಧಾನಿ ಮೋದಿ ಮಹಾರಾಷ್ಟ್ರದಲ್ಲಿ ಕಳೆದ ತಿಂಗಳು ಮಾಡಿದ್ದ ಎರಡು ಭಾಷಣಗಳು ನೀತಿ ಸಂಹಿತೆ ಉಲ್ಲಂಘನೆ ಎಂದು ದೂರಿ ಕಾಂಗ್ರೆಸ್ ಪಕ್ಷವು ಆಯೋಗಕ್ಕೆ ದೂರು ನೀಡಿತ್ತು. ವಿಚಾರಣೆ ನಡೆಸಿದ ಆಯೋಗ ಪ್ರಧಾನಿಯನ್ನು ಆರೋಪದಿಂದ ಮುಕ್ತಗೊಳಿಸಿತ್ತು. ಚುನಾವಣಾ ಆಯೋಗ ಮೂರು ದಿನಗಳ ಹಿಂದೆ ನಿರ್ಧಾರ ಪ್ರಕಟಿಸಿತ್ತು. ಮೂಲಗಳ ಪ್ರಕಾರ, ಮಹಾರಾಷ್ಟ್ರದ ವಾರ್ಧಾದಲ್ಲಿ ಏ.1ರಂದು ಪ್ರಧಾನಿ ಮಾಡಿದ್ದ ಭಾಷಣಕ್ಕೆ ಸಂಬಂಧಿಸಿದ ತೀರ್ಮಾನಕ್ಕೆ ಒಬ್ಬ ಸದಸ್ಯರು ಅಸಮ್ಮತಿ ವ್ಯಕ್ತಪಡಿಸಿದ್ದಾರೆ.
ಅಲ್ಪಸಂಖ್ಯಾತರೇ ಹೆಚ್ಚಿನ ಸಂಖ್ಯೆಯಲ್ಲಿ ಇರುವ ವಯನಾಡ್ನಲ್ಲಿ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದಾರೆ ಎಂದು ಪ್ರಧಾನಿ ವ್ಯಂಗ್ಯವಾಡಿದ್ದರು.
2:1ರ ಬಹುಮತದಲ್ಲಿ ದೂರು ತೀರ್ಮಾನಿಸಲು ಅವಕಾಶ ಇದೆ ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.