ADVERTISEMENT

ತರೂರ್ ಪ್ರಚಾರಕ್ಕೆ ಪಟೋಲೆ ವೀಕ್ಷಕ

​ಪ್ರಜಾವಾಣಿ ವಾರ್ತೆ
Published 9 ಮೇ 2019, 17:49 IST
Last Updated 9 ಮೇ 2019, 17:49 IST
 ಶಶಿ ತರೂರ್
ಶಶಿ ತರೂರ್   

ತಿರುವನಂತಪುರ:ಕೇರಳದ ತಿರುವನಂತಪುರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಕಾರ್ಯದ ಮೇಲ್ವಿಚಾರಣೆಗೆ ಹಿರಿಯ ನಾಯಕ ನಾನಾ ಪಟೋಲೆ ಅವರನ್ನು ವೀಕ್ಷಕರಾಗಿ ಎಐಸಿಸಿ ನಿಯೋಜನೆ ಮಾಡಿದೆ. ಈ ಕ್ಷೇತ್ರದ ಹಾಲಿ ಸಂಸದ ಶಶಿ ತರೂರ್ ಅವರು ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.

‘ಕ್ಷೇತ್ರದಲ್ಲಿ ನನ್ನ ಪರ ಪ್ರಚಾರ ನಡೆಸಲು ಕಾರ್ಯಕರ್ತರೇ ಬರುತ್ತಿಲ್ಲ, ಕಾರ್ಯಕರ್ತರ ಕೊರತೆ ಕಾಡುತ್ತಿದೆ. ಪಕ್ಷದ ಸ್ಥಳೀಯ ನಾಯಕರು ಮತ್ತು ಹಾಲಿ ಶಾಸಕರು ಸಹ ಪ್ರಚಾರಕ್ಕೆ ಬರುತ್ತಿಲ್ಲ’ ಎಂದು ಶಶಿ ತರೂರ್ ಎಐಸಿಸಿಗೆ ದೂರು ನೀಡಿದ್ದರು. ಹೀಗಾಗಿ ಪಕ್ಷವು ಈ ಕ್ರಮ ತೆಗೆದುಕೊಂಡಿದೆ ಎಂದು ಮೂಲಗಳು ಮಾಹಿತಿ ನೀಡಿವೆ.

‘ತಿರುವನಂತಪುರ ಕ್ಷೇತ್ರದಲ್ಲಿ ನಡೆಯುತ್ತಿರುವ ಪ್ರಚಾರ ಕಾರ್ಯವನ್ನು ನಾನು ಬಹಳ ಹತ್ತಿರದಿಂದ ಗಮನಿಸಿದ್ದೇನೆ. ಪ್ರಚಾರ ತೃಪ್ತಿದಾಯಕ ಮಟ್ಟದಲ್ಲಿ ಇಲ್ಲ’ ಎಂದುಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮುಲ್ಲಪಳ್ಳಿ ರಾಮಚಂದ್ರನ್ ಹೇಳಿದ್ದಾರೆ.

ADVERTISEMENT

ತರೂರ್ ವಿರುದ್ಧ ಬಿಜೆಪಿಯು ಕುಮ್ಮನಂ ರಾಜಶೇಖರನ್ ಅವರನ್ನು ಸ್ಪರ್ಧೆಗೆ ಇಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.