ನವದೆಹಲಿ: ‘ಪಶ್ಚಿಮಬಂಗಾಳದ ಡೈಮಂಡ್ ಹಾರ್ಬರ್ ಕ್ಷೇತ್ರದಲ್ಲಿ ಮೇ 19ರಂದು ನಡೆದ ಮತದಾನದಲ್ಲಿ ದೊಡ್ಡ ಪ್ರಮಾಣದ ಅಕ್ರಮ ನಡೆದಿದ್ದು, ಮರು ಮತದಾನ ನಡೆಸಲು ಸಿಪಿಎಂ ಆಗ್ರಹಪಡಿಸಿದೆ.
ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರು ಈ ಸಂಬಂಧ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದು, ‘ದೊಡ್ಡ ಪ್ರಮಾಣದ ಅಕ್ರಮ ನಡೆದಿದ್ದು, ಸಂವಿಧಾನದ 324ನೇ ವಿಧಿ ಜಾರಿಗೊಳಿಸಬೇಕು’ ಎಂದು ಕೋರಿದ್ದಾರೆ. ಈ ವಿಧಿಯ ಅಡಿಯಲ್ಲಿ ಆಡಳಿತ ಯಂತ್ರವನ್ನು ನೇರವಾಗಿ ಆಯೋಗದ ನಿಯಂತ್ರಣಕ್ಕೆ ತೆಗೆದುಕೊಳ್ಳುವುದಕ್ಕೆ ಅವಕಾಶ ಇದೆ.
ಈ ಕ್ಷೇತ್ರದಲ್ಲಿಯೇ ಮರುಮತದಾನ ನಡೆಸಲು ಆದೇಶಿಸಬೇಕು ಎಂದು ಕೋರಿ ಬಿಜೆಪಿ ಕೂಡ ಮನವಿ ಸಲ್ಲಿಸಿದೆ. ಮುಖ್ಯಮಂತ್ರಿಯ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಈ ಕ್ಷೇತ್ರದಲ್ಲಿ ಟಿಎಂಸಿ ಅಭ್ಯರ್ಥಿಯಾಗಿದ್ದು, ಇವರ ಗೆಲುವಿಗಾಗಿ ಬಿಜೆಪಿ ಜೊತೆಗೆ ಒಳಒಪ್ಪಂದ ಆಗಿರುವುದು ಸ್ಪಷ್ಟವಾಗಿದೆ ಎಂದು ಸಿಪಿಎಂ ಆರೋಪಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.