ADVERTISEMENT

ಪ್ರಧಾನಿ ಮೋದಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ದಿನೇಶ್ ಗುಂಡೂರಾವ್ 

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2019, 6:59 IST
Last Updated 10 ಏಪ್ರಿಲ್ 2019, 6:59 IST
   

ದಾವಣಗೆರೆ: ಯುವ ಮತದಾರರನ್ನು ಸೆಳೆಯಲು ಸೇನೆ ಸಾಧನೆಯನ್ನು ಬಳಸಿಕೊಂಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು.

ರಾಜ್ಯದಲ್ಲಿನ ಚುನಾವಣಾ ಪ್ರಚಾರ ಸಭೆಗಳಲ್ಲಿ ಪಾಲ್ಗೊಂಡ ಮೋದಿ ಅವರು, ಹೊಸ ಮತದಾರರು ತಮ್ಮ ಮತವನ್ನು ಸೇನೆಯ ಹೋರಾಟಕ್ಕೆ ಅರ್ಪಿಸಬೇಕು ಎಂದಿರುವುದು ಸ್ಪಷ್ಟವಾಗಿ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದರು.

ಬುಧವಾರ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು.

ADVERTISEMENT

ಚುನಾವಣಾ ಆಯೋಗವೂ ಎಲ್ಲಾ ತನಿಖಾ ಸಂಸ್ಥೆಗಳಂತೆ ಮೋದಿ ನಿಯಂತ್ರಣದಲ್ಲಿ ಬರುವುದರಿಂದ ನ್ಯಾಯ ಸಿಗುವುದು ಅನುಮಾನ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಬಿಜೆಪಿ ಟಿಕೆಟ್ ಹಂಚಿಕೆಯಲ್ಲಿ ಸಾಮಾಜಿಕ ನ್ಯಾಯವನ್ನು ಕಡೆಗಣಿಸಿದೆ. ರಾಜ್ಯದಲ್ಲಿ ಅಲ್ಪಸಂಖ್ಯಾತರಿಗಷ್ಟೇ ಅಲ್ಲ ಹಿಂದುಳಿದ ವರ್ಗದ ಒಬ್ಬರಿಗೂ ಟಿಕೆಟ್ ನೀಡಿಲ್ಲ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.