ADVERTISEMENT

ಫೇಸ್‌ಬುಕ್‌ನಲ್ಲಿ ಬಿಜೆಪಿ ಪರ ಪ್ರಚಾರ: ಸರ್ಕಾರಿ ನೌಕರ ಅಮಾನತು

​ಪ್ರಜಾವಾಣಿ ವಾರ್ತೆ
Published 2 ಏಪ್ರಿಲ್ 2019, 12:10 IST
Last Updated 2 ಏಪ್ರಿಲ್ 2019, 12:10 IST

ಗಂಗಾವತಿ: ಫೇಸ್‌ಬುಕ್‌ನಲ್ಲಿ ಬಿಜೆಪಿ ಪರ ಪ್ರಚಾರ ಮಾಡಿದ ಆರೋಪದ ಮೇಲೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ತಾಲ್ಲೂಕು ವಿಸ್ತೀರ್ಣಾಧಿಕಾರಿ ಕಚೇರಿಯ ವಾರ್ಡನ್‌ ಗುರು ಬಸವರಾಜ ಅವರನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಆದೇಶ ಹೊರಡಿಸಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಿಂದ ಆರಂಭಿಸಿ ಈಗ ಪ್ರಸ್ತುತ ನಡೆಯುತ್ತಿರುವ ಲೋಕಸಭಾ ಚುನಾವಣೆಯವರೆಗೂ ಗುರು ಬಸವರಾಜ ಅವರು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಬಿಜೆಪಿ ನಾಯಕರ ಚಿತ್ರಗಳನ್ನು ಅಪ್ಲೋಡ್‌ ಮಾಡಿ, ಬಿಜೆಪಿ ಪರ ನಿರಂತರ ಪ್ರಚಾರ ನಡೆಸಿದ್ದಾರೆ. ಅವರು ಒಬ್ಬ ಸರ್ಕಾರಿ ನೌಕರರಾಗಿದ್ದು ತಮ್ಮ ಜವಾಬ್ದಾರಿ ಮರೆತಿದ್ದಾರೆ. ಕರ್ನಾಟಕ ನಾಗರಿಕ ಸೇವಾ (ನಡತೆ) ನಿಯಮ, ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT