ಚನ್ನಪಟ್ಟಣ: ‘ಅವನು ಗಂಡಸಾಗಿದ್ದರೆ ಈ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿದ್ದ. ಆದರೆ ಕುಸ್ತಿ ನೋಡಲು ಬಂದ ವ್ಯಕ್ತಿಯನ್ನು ಅಖಾಡಕ್ಕೆ ಇಳಿಸಿದ್ದಾನೆ’ ಎಂದು ಸಚಿವ ಡಿ.ಕೆ. ಶಿವಕುಮಾರ್ ಬಿಜೆಪಿ ಮುಖಂಡ ಸಿ.ಪಿ. ಯೋಗೇಶ್ವರ್ ವಿರುದ್ಧ ವಾಗ್ದಾಳಿ ನಡೆಸಿದರು.
ಚನ್ನಪಟ್ಟಣದದಲ್ಲಿ ಸಹೋದರ ಡಿ.ಕೆ.ಸುರೇಶ್ ಪರ ಮತಯಾಚನೆ ಸಂದರ್ಭ ಅವರು ಮಾತನಾಡಿದರು.
‘ಅವನು ನಿಜವಾದ ಗಂಡಸೇ ಆಗಿದ್ದರೆ ಸುರೇಶ್ ವಿರುದ್ಧ ಸ್ಪರ್ಧೆ ಮಾಡುತ್ತಿದ್ದ. ಹೇಡಿಯಂತೆ ಹಿಂದೆ ಸರಿದು, ಈಗ ಮಾಧ್ಯಮಗಳ ಮುಂದೆ ಬಾಯಿಗೆ ಬಂದಂತೆ ಮಾತನಾಡುತ್ತಾನೆ. ಅವನನ್ನ ಈ ಭಾಗದಲ್ಲಿ ಬಿಜೆಪಿ ಬಾವುಟ ಕಟ್ಟಲು ಇಟ್ಟುಕೊಂಡಿದ್ದಾರೆಅಷ್ಟೇ. ಯಡಿಯೂರಪ್ಪ ಆತನನ್ನು ಹತ್ತಿರಕ್ಕೆ ಸೇರಿಸುತ್ತಿಲ್ಲ. ಹೈಕಮಾಂಡ್ ಕೂಡ ನಿರ್ಲಕ್ಷ್ಯ ಮಾಡಿದೆ. ಆದರೂ ತಾನು ಬಿಎಸ್ವೈಗೆ ಬಹಳ ಹತ್ತಿರದಲ್ಲಿ ಇದ್ದೇನೆ ಎಂದು ನಂಬಿಸುತ್ತಿದ್ದಾನೆ’ ಎಂದು ಟೀಕಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.