ನವದೆಹಲಿ (ಪಿಟಿಐ): ಪರಮಾಣು ಸ್ಥಾವರ ವಿರೋಧಿ ಕಾರ್ಯಕರ್ತ ಎಸ್.ಪಿ.ಉದಯಕುಮಾರ್ ಅವರು ಆಮ್ ಆದ್ಮಿ ಪಕ್ಷದ (ಎಎಪಿ) ಲೋಕಸಭೆ ಚುನಾವಣಾ ಅಭ್ಯರ್ಥಿಗಳ ಏಳನೇ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.
ಎಎಪಿ ಮಂಗಳವಾರ ಬಿಡುಗಡೆ ಮಾಡಿದ 26 ಅಭ್ಯರ್ಥಿಗಳ ಪಟ್ಟಿಯಲ್ಲಿ ಉದಯಕುಮಾರ್ ಹೆಸರಿದೆ. ಅವರು ಕನ್ಯಾಕುಮಾರಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.
ಕೇಂದ್ರಾಡಳಿತ ಪ್ರದೇಶ ಪುದುಚೇರಿ ಸೇರಿದಂತೆ 10 ರಾಜ್ಯಗಳ ಲೋಕಸಭಾ ಸ್ಥಾನಗಳಿಗೆ ಎಎಪಿಯು ಮಂಗಳವಾರ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಎಎಪಿಯು ಇದುವರೆಗೆ 286 ಹುರಿಯಾಳುಗಳನ್ನು ಕಣಕ್ಕಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.