ಕಿಶನ್ಗಂಜ್ (ಪಿಟಿಐ): ಕಿಶನ್ಗಂಜ್ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ ಜೆಡಿಯು ಅಭ್ಯರ್ಥಿ ಕಣದಿಂದ ಹಿಂದೆ ಸರಿದಿದ್ದಾರೆ. ಇದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಮುಜುಗರಕ್ಕೀಡು ಮಾಡಿದೆ.
‘ಅಲ್ಪಸಂಖ್ಯಾತರ ಮತ ಒಡೆದು ಹೋಗಬಾರದು ಎಂಬ ಕಾರಣಕ್ಕಾಗಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ ಚುನಾವಣಾ ಅಖಾಡದಿಂದ ಹಿಂದೆ ಸರಿಯಲು ನಿರ್ಧರಿಸಿದ್ದೇನೆ’ ಎಂದು ಜೆಡಿಯು ಅಭ್ಯರ್ಥಿ ಅಕ್ತರುಲ್ ಇಮಾನ್ ತಿಳಿಸಿದ್ದಾರೆ. ಅಲ್ಪಸಂಖ್ಯಾತರ ಪ್ರಾಬಲ್ಯದ ಕಿಶನ್ಗಂಜ್ ಕ್ಷೇತ್ರದಿಂದ ಕಾಂಗ್ರೆಸ್ನ ಹಾಲಿ ಸಂಸದ ಮೌಲಾನಾ ಅಸ್ರಾರುಲ್ ಹಕ್ ಪುನರಾಯ್ಕೆ ಬಯಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.