
ಪ್ರಜಾವಾಣಿ ವಾರ್ತೆಲಖನೌ: ಸೂಚಕರು ನಿಗದಿತ ಸಮಯಕ್ಕೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಕಚೇರಿಗೆ ಬರಲು ಸಾಧ್ಯವಾಗದೇ ಇದ್ದುದರಿಂದ ನಟಿ ಹಾಗೂ ಮೀರಠ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನಗ್ಮಾ ಅವರು ಶುಕ್ರವಾರ ನಾಮಪತ್ರ ಸಲ್ಲಿಸಲು ವಿಫಲರಾದರು.
ಇದಕ್ಕೆಲ್ಲ ಪೊಲೀಸರೇ ಕಾರಣ ಎಂದು ನಗ್ಮಾ ದೂರಿದ್ದಾರೆ. ಪೊಲೀಸರು ತಡೆ ಒಡ್ಡಿದ್ದರಿಂದ ಸೂಚಕರಿಗೆ ನಿಗದಿತ ಸಮಯಕ್ಕೆ ಕಚೇರಿಗೆ ಬರಲು ಸಾಧ್ಯವಾಗಲಿಲ್ಲ ಎಂದು ಅವರು ಹೇಳಿದ್ದಾರೆ. ಮೀರಠ್ನಲ್ಲಿ ಏಪ್ರಿಲ್ 10ರಂದು ಮತದಾನ ನಡೆಯಲಿದ್ದು, ಶನಿವಾರ ನಾಮಪತ್ರ ಸಲ್ಲಿಸಲು ಕೊನೆಯ ದಿನ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.