ADVERTISEMENT

ಬಿಜೆಪಿ ಅಭ್ಯರ್ಥಿ ಮೇಲೆ ಹಲ್ಲೆ

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2014, 19:30 IST
Last Updated 10 ಏಪ್ರಿಲ್ 2014, 19:30 IST

ಬಾಗಪತ್‌ (ಪಿಟಿಐ):  ಮುಂಬೈನ ಮಾಜಿ ಪೊಲೀಸ್‌ ಕಮಿಷನರ್‌ ಮತ್ತು  ಬಾಗಪತ್‌ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸತ್ಯಪಾಲ್‌ ಸಿಂಗ್‌ ಅವರ ಮೇಲೆ ಗುರುವಾರ ಅಪರಿಚಿತ ವ್ಯಕ್ತಿಗಳು ಹಲ್ಲೆ ನಡೆಸಿದ್ದಾರೆ.

‘ಸಿಂಗ್‌ ಅವರು ಬದೌತ್‌ ಪೊಲೀಸ್‌ ಠಾಣೆ ವ್ಯಾಪ್ತಿಯ ಮಲ್ಕಾಪುರ್‌ ಮತ­ಗಟ್ಟೆಯಲ್ಲಿನ ಪರಿಸ್ಥಿತಿ ವೀಕ್ಷಣೆ­ಗೆಂದು ತೆರಳಿದ ಸಂದರ್ಭದಲ್ಲಿ, ಅಲ್ಲಿನ ಕೆಲವು ಚಟುವಟಿಕೆಗಳಿಗೆ ಅವರು ಆಕ್ಷೇಪ ವ್ಯಕ್ತಪಡಿಸಿದಾಗ ವ್ಯಕ್ತಿಯೊಬ್ಬ ಸಿಂಗ್‌ ಮೇಲೆ ಹಲ್ಲೆ ನಡೆಸಿದ. ಇದರಿಂದಾಗಿ ಘರ್ಷಣೆ ಉಂಟಾಯಿತು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್‌ ಶಾಹಿ  ತಿಳಿಸಿದ್ದಾರೆ.

ಘಟನೆಯನ್ನು ಖಂಡಿಸಿರುವ ಲಖನೌ ಬಿಜೆಪಿ ವಕ್ತಾರ ವಿಜಯ್‌ ಬಹಾದ್ದೂರ್‌ ಪಾಠಕ್‌, ‘ಹತಾಶೆಗೊಳಗಾದ ಕಾಂಗ್ರೆಸ್‌ ಹಾಗೂ ಅದರ ಮಿತ್ರ ಪಕ್ಷ ಆರ್‌ಎಲ್‌ಡಿ ಈ ಕೃತ್ಯ­ಎಸಗಿವೆ. ಭದ್ರತೆ ನೀಡುವಂತೆ ಸಿಂಗ್‌ ಮನವಿ ಮಾಡಿದ್ದರೂ ಅವರಿಗೆ ಸೂಕ್ತ ರಕ್ಷಣೆ ನೀಡಲಾಗಿಲ್ಲ’  ಎಂದು ದೂರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.