ADVERTISEMENT

ಮೀಸಾ ಪ್ರಚಾರಕ್ಕೆ ಐಐಟಿ ಪದವೀಧರರು

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2014, 19:30 IST
Last Updated 4 ಏಪ್ರಿಲ್ 2014, 19:30 IST

ಪಟ್ನಾ (ಐಎಎನ್‌ಎಸ್‌): ಬಿಹಾರದಲ್ಲಿ ಲೋಕಸಭೆ ಚುನಾವಣೆ ಪ್ರಚಾರಕ್ಕೆ ನೆರವು ಪಡೆಯಲು ರಾಷ್ಟ್ರೀಯ ಜನತಾ ದಳದ (ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್‌ ಅವರ ಪುತ್ರಿ ಮೀಸಾ ಭಾರತಿ ಅವರು ಇಬ್ಬರು ಐಐಟಿ ಪದವಿಧರರು ಹಾಗೂ ವೈದ್ಯರನ್ನು ನಿಯೋಜಿಸಿದ್ದಾರೆ.

ಸ್ವತಃ ಮೀಸಾ ಅವರ ಪತಿ ಶೈಲೇಶ್‌ ಕುಮಾರ್‌ ಅವರು ಮಾಹಿತಿ ತಂತ್ರಜ್ಞಾನ ತಜ್ಞರಾಗಿದ್ದು, ಈಗಾಗಲೇ ಪ್ರಚಾರ ಕೈಗೊಂಡಿದ್ದಾರೆ.
ವೈದ್ಯೆಯಾಗಿರುವ ಮೀಸಾ ಅವರು ಪಟ್ನಾದ ಪಾಟಲೀಪುತ್ರ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.