ADVERTISEMENT

ಮೈತ್ರಿ ಬಂಡಾಯ ಶಮನಕ್ಕೆ ಸಮಿತಿ

​ಪ್ರಜಾವಾಣಿ ವಾರ್ತೆ
Published 18 ಮಾರ್ಚ್ 2014, 9:04 IST
Last Updated 18 ಮಾರ್ಚ್ 2014, 9:04 IST

ಮುಂಬೈ (ಪಿಟಿಐ): ಮಹಾರಾಷ್ಟ್ರದ 48 ಲೋಕಸಭಾ ಕ್ಷೇತ್ರ­ಗಳಲ್ಲಿ ಕಾಂಗ್ರೆಸ್‌–ಎನ್‌ಸಿಪಿ ಮೈತ್ರಿಯಲ್ಲಿ ಯಾವುದೇ ಬಿರುಕು ಅಥವಾ ಬಂಡಾಯ ಉಂಟಾಗದಂತೆ ನೋಡಿಕೊಳ್ಳುವುದಕ್ಕೆ 10 ಸದಸ್ಯರ ಸಮನ್ವಯ ಸಮಿತಿ ರಚಿಸಲಾಗಿದೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಪೃಥ್ವಿರಾಜ್‌ ಚವಾಣ್‌ ಮತ್ತು ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಅವರಿಗೆ ಸಮಿತಿಯ ನೇತೃತ್ವ ವಹಿಸಲಾಗಿದೆ. ಮೈತ್ರಿಯಲ್ಲಿ ಯಾವುದೇ ಸಮಸ್ಯೆಗಳು ಉಂಟಾದಾಗ ಈ ಸಮಿತಿ ಅದನ್ನು ಪರಿಹರಿಸಲಿದೆ. ಪಕ್ಷದ ಪದಾಧಿಕಾರಿಗಳಿಗೆ ಸಮಸ್ಯೆಗಳನ್ನು ಹೇಳಿಕೊಳ್ಳುವುದಕ್ಕೆ ತಕ್ಷಣವೇ ಸಹಾಯವಾಣಿಯನ್ನು ಕೂಡ ಸ್ಥಾಪಿಸಲಾಗುವುದು ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್‌ ಪವಾರ್‌ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT