ADVERTISEMENT

ಲೈಂಗಿಕ ಕಿರುಕುಳ ದೂರು: ಸ್ಪರ್ಧೆಗೆ ಕಾಂಗ್ರೆಸ್‌ ಶಾಸಕ ನಕಾರ

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2014, 19:30 IST
Last Updated 15 ಏಪ್ರಿಲ್ 2014, 19:30 IST

ಬಸ್ತಿ, ಉತ್ತರಪ್ರದೇಶ (ಪಿಟಿಐ): ಬಸ್ತಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್‌ ಟಿಕೆಟ್‌ ಪಡೆದಿದ್ದ ಶಾಸಕ ಸಂಜಯ್‌ ಕುಮಾರ್‌ ಜೈಸ್ವಾಲ್‌  ಸ್ಪರ್ಧಿಸಲು ನಿರಾಕರಿಸಿದ್ದಾರೆ. ತಮ್ಮ ವಿರುದ್ಧ ಇರುವ ಲೈಂಗಿಕ ಕಿರುಕುಳ ಆರೋಪದಿಂದ ಮುಕ್ತ­ವಾಗುವವರೆಗೆ ಸ್ಪರ್ಧಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.

ಕಾಂಗ್ರೆಸ್‌ ಸರ್ಕಾರವು ಮಹಿಳೆಯರನ್ನು ಸಶಕ್ತ­ಗೊಳಿಸಲು ಸಾಕಷ್ಟು ಕೆಲಸ ಮಾಡಿದೆ. ಆದರೆ ಒಬ್ಬ ಮಹಿಳೆ ತನ್ನ ಮೇಲೆ ಕಿರುಕುಳದ ಆರೋಪ ಮಾಡಿದ್ದಾರೆ ಎಂದು ಸೋನಿಯಾ ಗಾಂಧಿ ಅವರಿಗೆ ಬರೆದ ಪತ್ರದಲ್ಲಿ ಜೈಸ್ವಾಲ್‌ ವಿವರಿಸಿದ್ದಾರೆ.
ಲಖನೌನ ಹಜ್ರತ್‌ಗಂಜ್‌ ಪೊಲೀಸ್ ಠಾಣೆಯಲ್ಲಿ ಜೈಸ್ವಾಲ್‌ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ಕಿರುಕುಳದ ದೂರು ದಾಖಲಿಸಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.