ADVERTISEMENT

ಸಾಮಾಜಿಕ ತಾಣಗಳಲ್ಲಿ ಅವಹೇಳನ: ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 18 ಮಾರ್ಚ್ 2014, 19:30 IST
Last Updated 18 ಮಾರ್ಚ್ 2014, 19:30 IST

ತಿರುವನಂತಪುರ (ಪಿಟಿಐ): ಅಭ್ಯರ್ಥಿಗಳ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ವಿವರ­ಗಳನ್ನು ಪ್ರಕಟಿಸುವವರು ಹಾಗೂ ಅದನ್ನು ಇತರರ ಜತೆ ಹಂಚಿಕೊಳ್ಳು­ವವರು ಇನ್ನು ಮುಂದೆ ಕಾನೂನು ಕ್ರಮಗಳನ್ನು ಎದುರಿಸ­ಬೇಕಾಗುತ್ತದೆ.

ಕೇಂದ್ರ ಸಚಿವ ಹಾಗೂ ಕಾಂಗ್ರೆಸ್‌ ಅಭ್ಯರ್ಥಿ ಕೊಡಿಯ್‌ಕುಣ್ಣಿಲ್‌ ಸುರೇಶ್‌ ಅವರು ದಾಖಲಿಸಿದ ಪ್ರಕರಣದ ವಿಚಾರಣೆ ಸಂದರ್ಭದಲ್ಲಿ ಅಳಪ್ಪುರ ಜಿಲ್ಲಾಧಿಕಾರಿ ಎನ್‌.ಪದ್ಮಕುಮಾರ್‌ ಈ ಅಂಶವನ್ನು ಸ್ಪಷ್ಟಪಡಿಸಿದ್ದಾರೆ.

ರಾಜಕೀಯ ದುರುದ್ದೇಶ­ದಿಂದ ತಮ್ಮ ವರ್ಚಸ್ಸಿಗೆ ಕಳಂಕ ತರುವಂತಹ ನಕಲಿ ಹಾಗೂ ವಿರೂಪಗೊಳಿಸಿದ ಛಾಯಾ­ಚಿತ್ರಗಳನ್ನು   ಸಾಮಾಜಿಕ ಜಾಲ­ತಾಣಗಳಲ್ಲಿ ಹರಿಯಬಿಡ­ಲಾಗಿದ್ದು, ಈ ಕೃತ್ಯ ಎಸಗಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸುರೇಶ್‌ ಅವರು ದೂರು ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.