ADVERTISEMENT

‘ಶಕ್ತಿ ಕಳೆದುಕೊಂಡ ಕಾಂಗ್ರೆಸ್’

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2014, 19:30 IST
Last Updated 21 ಮಾರ್ಚ್ 2014, 19:30 IST

ನವದೆಹಲಿ (ಪಿಟಿಐ): ಕೇಂದ್ರ ಸಚಿವ ಪಿ. ಚಿದಂಬರಂ ಅವರು ಚುನಾವಣೆ­ಯಿಂದ ಹಿಂದೆ ಸರಿದು­ದನ್ನು ಬಿಜೆಪಿಯು ಕಾಂಗ್ರೆಸ್‌ ವಿರುದ್ಧ ಟೀಕಾ ಪ್ರಹಾರ ನಡೆಸಲು ಬಳಸಿಕೊಂಡಿದೆ. ‘ಕಾಂಗ್ರೆಸ್‌ ಸ್ಪರ್ಧೆಗೆ ಹೆದರಿಕೊಂಡು ಓಡಿ ಹೋಗುತ್ತಿದೆ’ ಎಂಬುದನ್ನು ಇದು ತೋರಿಸುತ್ತದೆ ಎಂದು ಗೇಲಿ ಮಾಡಿದೆ.

ಚಿದಂಬರಂ, ಹಿಂದೆ ಸರಿದಿರುವುದು ಸಾಂಕೇತಿಕ ಮಾತ್ರ. ಈ ಇಡೀ ಬೆಳವಣಿಗೆ ಕಾಂಗ್ರೆಸ್‌ನ ಸದ್ಯದ ಮನಸ್ಥಿತಿಯನ್ನು ತೋರಿಸುತ್ತದೆ ಎಂದು ಬಿಜೆಪಿ ವಕ್ತಾರರಾದ ನಿರ್ಮಲಾ ಸೀತರಾಮನ್‌ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.