ADVERTISEMENT

ಎಂಥಾ ಮಾತು

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2024, 20:31 IST
Last Updated 18 ಏಪ್ರಿಲ್ 2024, 20:31 IST
ಅಸಾದುದ್ದೀನ್‌ ಒವೈಸಿ
ಅಸಾದುದ್ದೀನ್‌ ಒವೈಸಿ   

ಬಿಜೆಪಿಯು ತನ್ನ ಪ್ರಣಾಳಿಕೆಯಲ್ಲಿ ‘ಅಲ್ಪಸಂಖ್ಯಾತ’ರು ಎಂಬ ಪದವನ್ನು ಬಳಸದೆ, ‘ಶೋಷಿತ’ ಎಂಬ ಪದವನ್ನು ಬಳಸಿದೆ. ‘ಅಲ್ಪಸಂಖ್ಯಾತ’ ಪದವನ್ನು ಭಾರತದ ಸಂವಿಧಾನದಲ್ಲಿ ಕೂಡ ಉಲ್ಲೇಖಿಸಲಾಗಿದೆ ಆದರೆ ಬಿಜೆಪಿಯು ಇದನ್ನು ದ್ವೇಷಿಸುತ್ತಿದೆ. ಆ ಪಕ್ಷವು ಪತ್ರಿಕೆಗಳಲ್ಲಿ ನೀಡಿರುವ ಜಾಹೀರಾತುಗಳಲ್ಲೂ ಶೋಷಿತ ಸಮುದಾಯಗಳ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಗುವುದು ಎಂದು ಹೇಳಿದೆ

ಅಸಾದುದ್ದೀನ್‌ ಒವೈಸಿ, ಎಐಎಂಐಎಂ ಮುಖ್ಯಸ್ಥ

ಮಧ್ಯಪ್ರದೇಶದ 29 ಲೋಕಸಭಾ ಕ್ಷೇತ್ರಗಳಲ್ಲೂ ಬಿಜೆಪಿಯು ಗೆಲ್ಲಲಿದೆ. ಬಿಜೆಪಿಗೆ ಸರ್ಕಾರ ರಚಿಸಲು ಸಾಧ್ಯವಿದೆ ಎಂಬುದನ್ನು ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರು ಸಾಬೀತುಪಡಿಸಿದ್ದರು. 2014ರ ಅನಂತರ ಪ್ರಧಾನಿ ನರೇಂದ್ರ ಮೋದಿ ಅವರು ಅದನ್ನು ಮುಂದುವರಿಸಿದ್ದಾರೆ. ತನ್ನ ಕಾರ್ಯಕರ್ತರಿಂದಾಗಿಯೇ ವಿಶ್ವದಾದ್ಯಂತ ಗುರುತಿಸಿಕೊಂಡಿರುವ ಏಕೈಕ ಪಕ್ಷ ಬಿಜೆಪಿಯಾಗಿದೆ

ADVERTISEMENT

ಮೋಹನ್‌ ಯಾದವ್‌, ಮಧ್ಯಪ್ರದೇಶ ಮುಖ್ಯಮಂತ್ರಿ

ಮೋಹನ್‌ ಯಾದವ್‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.